ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

Sampriya
ಮಂಗಳವಾರ, 12 ಆಗಸ್ಟ್ 2025 (14:19 IST)
Photo Credit X
ನವದೆಹಲಿ: ಈಚೆಗೆ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಭಾರತ ತಂಡದ ಸಾರಥ್ಯವನ್ನು ವಹಿಸಿಕೊಳ್ಳುವ ಜೊತೆಗೆ ರನ್‌ ಹೊಳೆ ಹರಿಸಿದ ಯುವರಾಜ ಶುಭಮನ್‌ ಗಿಲ್‌ ಅವರಿಗೆ ಹೊಸ ಜವಾಬ್ಧಾರಿ ನೀಡಲು ಬಿಸಿಸಿಐ ಸಿದ್ಧತೆ ನಡೆಸಿದೆ. . 

ಮುಂದಿನ ತಿಂಗಳು ಆರಂಭವಾಗುವ ಏಷ್ಯಾ ಕಪ್‌ ಟಿ20 ಟೂರ್ನಿಗೆ 25 ವರ್ಷದ ಶುಭಮನ್‌ ಗಿಲ್‌ ಉಪ ನಾಯಕರಾಗುವ ಸಾಧ್ಯತೆ ದಟ್ಟವಾಗಿದೆ. ಗಿಲ್‌ ಅವರು ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಒಂದು ದ್ವಿಶತಕ, ಮೂರು ಶತಕ ಬಾರಿಸುವ ಜೊತೆಗೆ ಹಲವು ದಾಖಲೆ ಬರೆದಿದ್ದರು. ಸರಣಿಯನ್ನು 2–2ರಿಂದ ಸಮಬಲ ಸಾಧಿಸಿ, ಅಮೋಘ ಸಾಧನೆ ಮೆರೆದಿದ್ದರು. 

ಭಾರತ ಟಿ20 ತಂಡದ ಪೂರ್ಣಕಾಲಿಕ ನಾಯಕರಾಗಿ ಸೂರ್ಯಕುಮಾರ್‌ ಯಾದವ್‌ ಇದ್ದಾರೆ. ಉಪನಾಯಕ ಸ್ಥಾನಕ್ಕೆ ಗಿಲ್‌ ಆಯ್ಕೆಯಾಗುವ ಸಾಧ್ಯತೆಯಿದೆ. ಆದರೆ, ಆ ಸ್ಥಾನಕ್ಕೆ ಆಲ್‌ರೌಂಡರ್‌ ಅಕ್ಷರ್‌ ಪಟೇಲ್‌ ಅವರಿಂದ ಪೈಪೋಟಿಯಿದೆ.

ಸೆ.9ರಂದು ಯುಎಇನಲ್ಲಿ ಟೂರ್ನಿ ಆರಂಭವಾಗಲಿದೆ. ವೇಗಿ ಜಸ್‌ಪ್ರೀತ್ ಬೂಮ್ರಾ ಟೂರ್ನಿಯಲ್ಲಿ ಆಡಲಿದ್ದು, ಅಕ್ಟೋಬರ್ ಆರಂಭದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಅವರು ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ.

ಸಂಜು ಸ್ಯಾಮ್ಸನ್ ಮೊದಲ ಕೀಪರ್ ಆಗುವುದು ಬಹುತೇಕ ಖಚಿತವಾದರೂ, ಎರಡನೇ ಕೀಪರ್ ಸ್ಥಾನಕ್ಕೆ ಜಿತೇಶ್ ಶರ್ಮಾ ಅಥವಾ ಧ್ರುವ ಜುರೇಲ್ ಆಯ್ಕೆಯಾಗುವ ಸಾಧ್ಯತೆಯಿದೆ.   ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಇದೇ 19 ಅಥವಾ 20 ರಂದು ಏಷ್ಯಾ ಕಪ್‌ಗೆ ತಂಡವನ್ನು ಆಯ್ಕೆ ಮಾಡುವ ನಿರೀಕ್ಷೆಯಿದೆ.

ಸಂಭಾವ್ಯ ಆಟಗಾರರು ಹೀಗಿದ್ದಾರೆ:  ಸೂರ್ಯಕುಮಾರ್ ಯಾದವ್‌ (ನಾಯಕ), ಶುಭಮನ್‌ ಗಿಲ್‌, ಅಭಿಷೇಕ್‌ ಶರ್ಮಾ, ಸಂಜು ಸ್ಯಾಮ್ಸನ್‌ (ವಿಕೆಟ್‌ ಕೀಪರ್‌) ತಿಲಕ್‌ ವರ್ಮಾ, ಶಿವಂ ದುಬೆ, ಅಕ್ಷರ್‌ ಪಟೇಲ್‌, ವಾಷಿಂಗ್ಟನ್‌ ಸುಂದರ್‌, ವರುಣ್ ಚಕ್ರವರ್ತಿ, ಕುಲದೀಪ್‌ ಯಾದವ್‌, ಜಸ್‌ಪ್ರೀತ್‌ ಬೂಮ್ರಾ, ಅರ್ಷದೀಪ್‌ ಸಿಂಗ್‌, ಹಾರ್ದಿಕ್‌ ಪಾಂಡ್ಯ, ಹರ್ಷಿತ್ ರಾಣಾ/ಪ್ರಸಿದ್ಧ ಕೃಷ್ಣ, ಜಿತೇಶ್‌ ಶರ್ಮಾ/ಧ್ರುವ ಜುರೇಲ್‌

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಮುಂದಿನ ಸುದ್ದಿ
Show comments