Webdunia - Bharat's app for daily news and videos

Install App

ವಿಜಯ್ ಹಜಾರೆ ಸೆಮಿಫೈನಲ್: ಪೃಥ್ವಿ ಶಾ ಆಟಕ್ಕೆ ಕಂಗಾಲಾದ ಕರ್ನಾಟಕ

Webdunia
ಗುರುವಾರ, 11 ಮಾರ್ಚ್ 2021 (11:28 IST)
ನವದೆಹಲಿ: ವಿಜಯ್ ಹಜಾರೆ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಮುಂಬೈ ಮುಖಾಮುಖಿಯಾಗಿದ್ದು, ಮುಂಬೈ ಪರ ಪೃಥ್ವಿ ಶಾ ಭರ್ಜರಿ ಶತಕ ಗಳಿಸಿ ಆಡುತ್ತಿದ್ದಾರೆ.


ಟಾಸ್ ಗೆದ್ದು ಕರ್ನಾಟಕ ಮೊದಲು ಬೌಲಿಂಗ್ ಆಯ್ದುಕೊಂಡಿತು. ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ 91 ಎಸೆತಗಳಲ್ಲಿ 4 ಸಿಕ್ಸರ್, 13 ಬೌಂಡರಿಗಳೊಂದಿಗೆ 116 ರನ್ ಗಳಿಸಿ ಎದುರಾಳಿಗಳನ್ನು ಚೆಂಡಾಡುತ್ತಿದ್ದಾರೆ. ಇನ್ನೊಂದು ತುದಿಯಲ್ಲಿ ಶ್ಯಾಮ್ಸ್ ಮುಲಾನಿ 27 ರನ್ ಗಳಿಸಿ ಆಡುತ್ತಿದ್ದಾರೆ. ಮುಂಬೈ ಇತ್ತೀಚೆಗಿನ ವರದಿ ಬಂದಾಗ 30 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿ ಆಡುತ್ತಿದೆ.

ಯಶಸ್ವಿ ಜೈಸ್ವಾಲ್ 6 ರನ್ ಗಳಿಸಿ ಪ್ರಸಿದ್ಧ್ ಕೃಷ್ಣಗೆ ವಿಕೆಟ್ ಒಪ್ಪಿಸಿದರೆ, ಆದಿತ್ಯ ತಾರೆ 16 ರನ್ ಗೆ ಗೌತಮ್ ಬೌಲಿಂಗ್ ನಲ್ಲಿ ಔಟಾಗಿದ್ದಾರೆ. ಇತ್ತ ಕರ್ನಾಟಕವೂ ಬ್ಯಾಟಿಂಗ್ ನಲ್ಲಿ ಸದೃಢವಾಗಿದೆ. ದೇವದತ್ತ್ ಪಡಿಕ್ಕಲ್ ಸತತ ನಾಲ್ಕು ಶತಕಗಳೊಂದಿಗೆ ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ. ರವಿಕಾಂತ್ ಸಮರ್ಥ್ ಕೂಡಾ ಅವರಿಗೆ ತಕ್ಕ ಸಾಥ್ ನೀಡುತ್ತಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ಕರ್ನಾಟಕ ಕೂಡಾ ಮುಂಬೈಗೆ ತಕ್ಕ ಎದಿರೇಟು ಕೊಡಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments