ಮಯಾಂಕ್ ಅಗರ್ವಾಲ್ ಕೇಸ್ ನಲ್ಲಿ ಅನುಮಾನ ಹುಟ್ಟಿಸಿದ ಅಂಶಗಳು

Krishnaveni K
ಗುರುವಾರ, 1 ಫೆಬ್ರವರಿ 2024 (10:33 IST)
Photo Courtesy: Twitter
ಅಗರ್ತಲಾ: ಕರ್ನಾಟಕ ಕ್ರಿಕೆಟ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ವಿಮಾನ ಪ್ರಯಾಣ ವೇಳೆ ಅಸ್ವಸ್ಥಗೊಂಡ ಪ್ರಕರಣದ ಬಗ್ಗೆ ಹಲವು ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ.

ರಣಜಿ ಟ್ರೋಫಿ ಪಂದ್ಯವಾಡಲು ತಂಡದ ಜೊತೆ ಸೂರತ್ ಗೆ ಪ್ರಯಾಣ ಬೆಳೆಸುವಾಗ ಮಯಾಂಕ್ ವಿಮಾನದಲ್ಲಿ ಬಾಟಲಿ ನೀರು ಸೇವಿಸಿದ್ದರು. ಇದನ್ನು ಸೇವಿಸಿದ ಬಳಿಕ ಮಯಾಂಕ್ ಗೆ ವಾಂತಿಯಾಗಿದ್ದು ಗಂಟಲಿನಲ್ಲಿ ಉರಿ ಅನುಭವವಾಗಿದೆ. ಹೀಗಾಗಿ ತಕ್ಷಣವೇ ಅವರನ್ನು ಅಗರ್ತಲಾದ ಆಸ್ಪತ್ರೆಗೆ ದಾಖಲಿಸಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಯಿತು.

ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರಕಿದ್ದರಿಂದ ಮಯಾಂಕ್ ಚೇತರಿಸಿಕೊಂಡರು. ಇದೀಗ ಸ್ವತಃ ಮಯಾಂಕ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಸಮೇತ ನಾನು ಸುಧಾರಿಸಿಕೊಂಡಿದ್ದು ನಿಮ್ಮೆಲ್ಲರ ಪ್ರಾರ್ಥನೆಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಹೀಗಾಗಿ ಅಭಿಮಾನಿಗಳೂ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಮಯಾಂಕ್ ಪ್ರಕರಣದಲ್ಲಿ ಕಾಡುತ್ತಿರುವ ಅನುಮಾನಗಳು
ಘಟನೆ ಬಗ್ಗೆ ಮಯಾಂಕ್ ತಮ್ಮ ಮ್ಯಾನೇಜರ್ ಮೂಲಕ ತ್ರಿಪುರಾ ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಘಟನೆ ಬಗ್ಗೆ ವಿಚಾರಣೆ ನಡೆಸಲು ಮುಂದಾಗಿದ್ದಾರೆ.

ಸಾಮಾನ್ಯವಾಗಿ ವಿಮಾನ ಪ್ರಯಾಣಕ್ಕೆ ಮೊದಲು ಸಿಬ್ಬಂದಿ ಎಲ್ಲಾ ರೀತಿಯ ಸುರಕ್ಷತೆ ಕೈಗೊಳ್ಳಲಾಗಿದೆಯೇ? ಏನಾದರೂ ವಿಧ್ವಂಸಕ ವಸ್ತುಗಳಿವೆಯೇ ಎಂದು ಪರಿಶೀಲಿಸುತ್ತಾರೆ. ಎಲ್ಲಾ ರೀತಿಯ ಪರಿಶೀಲನೆಯ ನಂತರವಷ್ಟೇ ಹಾರಾಟಕ್ಕೆ ಅನುಮತಿ ನೀಡಲಾಗುತ್ತದೆ. ಹಾಗಿದ್ದರೆ ಪರಿಶೀಲನೆ ವೇಳೆಯೂ ಕಲುಷಿತ ನೀರು ಇರುವುದು ಯಾಕೆ ಪತ್ತೆಯಾಗಲಿಲ್ಲ ಎನ್ನುವುದು ಮೊದಲ ಅನುಮಾನ.

ಬಹುಶಃ ಈ ಬಾಟಲಿಯನ್ನು ಯಾರೋ ಪ್ರಯಾಣಿಕರೇ ತಂದಿಟ್ಟಿರಬಹುದು. ಆದರೆ ಪ್ರಯಾಣಿಕರು ಬಳಸಿದ ಬಾಟಲಿಯನ್ನು ಮಯಾಂಕ್ ಯಾಕೆ ಬಳಸಿದರು. ಅವರದ್ದೇ ಬಾಟಲಿಯಿಂದ ನೀರು ಯಾಕೆ ಸೇವಿಸಲಿಲ್ಲ ಎನ್ನುವುದು ಇನ್ನೊಂದು ಅನುಮಾನ ಕಾಡುತ್ತಿದೆ. ಇಂತಹ ಅನುಮಾನಗಳಿಗೆ ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB VS GT:ರಜತ್ ಪಟಿದಾರ್ ಬ್ಯಾಟಿಂಗ್ ಅಬ್ಬರ, ಗುಜರಾತ್ ಟೈಟನ್ಸ್‌ ಬಗ್ಗುಬಡಿದು ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ

RCB VS GT: ರಜತ್ ಪಟಿದಾರ್ ಅಬ್ಬರ, ಜಿಟಿಗೆ ಸವಾಲಿನ ಗುರಿ

RCB VS GT: ಕ್ವಾಲಿಫೈಯರ್‌ 1 ರೌಂಡ್‌ನಲ್ಲಿ ಟಾಸ್ ಸೋತ ಆರ್‌ಸಿಬಿ ಆರಂಭಿಕ ಆಘಾತ

GT VS RCB: ವಿರಾಟ್ ಕೊಹ್ಲಿ ಆರಂಭಿಕ ಆಟವೇ ಆರ್‌ಸಿಬಿ ಗೆಲುವಿಗೆ ಸುಗಮ

ವೈಭವ್ ಜೊತೆ ಫೋಟೋಗೆ ಪೋಸ್ ಕೊಡಿ ಎಂದ್ರೆ ನಾವೇನು ಫಿಲಂ ಸ್ಟಾರ್ ಅಲ್ಲ ಎಂದ ರಿಯಾನ್ ಪರಾಗ್ video

ಮುಂದಿನ ಸುದ್ದಿ
Show comments