Webdunia - Bharat's app for daily news and videos

Install App

ರವಿಶಾಸ್ತ್ರಿ ಮಾಡಿದ್ದ ಅವಮಾನ ಬಹಿರಂಗಪಡಿಸಿದ ಆರ್. ಅಶ್ವಿನ್

Webdunia
ಬುಧವಾರ, 22 ಡಿಸೆಂಬರ್ 2021 (08:40 IST)
ಮುಂಬೈ: ಟೀಂ ಇಂಡಿಯಾ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ರನ್ನು ರವಿಶಾಸ್ತ್ರಿ ಕೋಚ್ ಆಗಿದ್ದಾಗ ಮೂಲೆಗುಂಪು ಮಾಡಲಾಗಿತ್ತು ಎಂಬ ಆರೋಪಗಳಿತ್ತು. ಅದೀಗ ನಿಜವೆನಿಸುತ್ತಿದೆ.

ಇತ್ತೀಚೆಗೆ ಅಶ್ವಿನ್ ಸಂದರ್ಶನವೊಂದರಲ್ಲಿ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಗೆಲುವಿನ ವೇಳೆ ರವಿಶಾಸ್ತ್ರಿಯಿಂದ ತನಗಾದ ಅವಮಾನವನ್ನು ಹಂಚಿಕೊಂಡಿದ್ದಾರೆ.

‘ಟೆಸ್ಟ್ ಸರಣಿ ಗೆಲುವಿನ ಬಳಿಕ ರವಿಶಾಸ್ತ್ರಿ ಅಂದು ಐದು ವಿಕೆಟ್ ಕಿತ್ತ ಕುಲದೀಪ್ ಯಾದವ್ ರನ್ನು ವಿದೇಶದಲ್ಲಿ ಭಾರತದ ನಂ.1 ಸ್ಪಿನ್ನರ್ ಎಂದು ಹೊಗಳಿದ್ದರು. ನನಗೆ ಆಗ ಹೇಗನಿಸಿತ್ತು ಎಂದರೆ ಯಾರೋ ನನ್ನನ್ನು ಬಸ್ ನಿಂದ ಹೊರ ಹಾಕಿದಂತೆ. ನಾನೂ ಚೆನ್ನಾಗಿ ಆಡಿದ್ದೆ. ಆದರೆ ಐದು ವಿಕೆಟ್ ಕೀಳಲು ಸಾಧ‍್ಯವಾಗಿರಲಿಲ್ಲ. ಹಾಗಂತ ನಾವು ಪ್ರಯೋಜನಕ್ಕಿಲ್ಲ ಎಂದು ಅರ್ಥವೇ?

ಕುಲದೀಪ್ ಯಾದವ್ ಬಗ್ಗೆ ನನಗೆ ಹೆಮ್ಮೆಯಿತ್ತು. ಆದರೆ ಆಗ ನನ್ನನ್ನು ನಡೆಸಿಕೊಂಡ ರೀತಿ ತುಂಬಾ ಬೇಸರವುಂಟು ಮಾಡಿತ್ತು. ತಂಡದ ಸೆಲೆಬ್ರೇಷನ್ ಸಂದರ್ಭದಲ್ಲೂ ಬರಬೇಕೆನಿಸಲಿಲ್ಲ. ಆದರೆ ಕೊನೆಗೆ ಇದು ನಾವೆಲ್ಲಾ ಸೇರಿ ಪಡೆದುಕೊಂಡ ಗೆಲುವು ಎಂಬ ಕಾರಣಕ್ಕೆ ಸೇರಿಕೊಂಡೆ’ ಎಂದು ಅಶ್ವಿನ್ ಬಹಿರಂಗಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

ಮುಂದಿನ ಸುದ್ದಿ
Show comments