Webdunia - Bharat's app for daily news and videos

Install App

ರಾಹುಲ್ ದ್ರಾವಿಡ್ ನೀತಿಯಿಂದಾಗಿ ಕರ್ನಾಟಕದ ಒಬ್ಬ ಆಟಗಾರನಿಗೆ ಸನ್ಮಾನ, ಇನ್ನೊಬ್ಬರಿಗೆ ಬರೆ!

Webdunia
ಶುಕ್ರವಾರ, 11 ಮೇ 2018 (08:58 IST)
ಮುಂಬೈ: ಆಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸ್ಥಾನಕ್ಕೆ ಕರುಣ್ ನಾಯರ್ ಆಯ್ಕೆ ಮಾಡಿರುವುದರ ಬಗ್ಗೆ ಬಿಸಿಸಿಐ ವಲಯದಲ್ಲಿ ಅಸಮಾಧಾನದ ಅಲೆ ಎದ್ದಿದೆ ಎನ್ನಲಾಗಿದೆ.

ರಣಜಿ ಮತ್ತು ದೇಶೀಯ ಪಂದ್ಯಗಳಲ್ಲಿ ಇನ್ನೊಬ್ಬ ಕರ್ನಾಟಕದ ಆಟಗಾರ ಮಯಾಂಕ್ ಅಗರ್ವಾಲ್ ಭರ್ಜರಿ ಪ್ರದರ್ಶನ ತೋರಿದ್ದರು. ಹಾಗಿದ್ದರೂ ಅವರಿಗೆ ಸ್ಥಾನ ನೀಡದೇ ಕರುಣ್ ನಾಯರ್ ಗೆ ಸ್ಥಾನ ನೀಡಿದ್ದಕ್ಕೆ ಅಸಮಾಧಾನ ಮೂಡಿದೆ ಎನ್ನಲಾಗಿದೆ. ಆದರೆ ಇದಕ್ಕೆ ಕಾರಣವಾಗಿರುವುದು ಭಾರತ ಎ ತಂಡದ ಕೋಚ್ ರಾಹುಲ್ ದ್ರಾವಿಡ್ ರ ನಿಯಮ.

ಟೀಂ ಇಂಡಿಯಾದಲ್ಲಿ ಸ್ಥಾನ ಸಿಗಬೇಕೆಂದರೆ ಭಾರತ ಎ ತಂಡದಲ್ಲಿ ಆಡಲೇಬೇಕೆಂಬ ನಿಯಮವಿದೆ. ಈ ನಿಯಮ ಸ್ಥಾಪನೆಯಾಗಲು ಕಾರಣ ರಾಹುಲ್ ದ್ರಾವಿಡ್. ಯುವ ಆಟಗಾರರು ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ಮೊದಲು ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಗೆ ಸಿದ್ಧತೆ ನಡೆಸಬೇಕೆಂಬ ಉದ್ದೇಶದಿಂದ ದ್ರಾವಿಡ್ ಇಂತಹದ್ದೊಂದು ನಿಯಮ ತರಬೇಕೆಂದು ಆಗ್ರಹಿಸಿದ್ದರು.

ಆದರೆ ಆ ನಿಯಮದಿಂದ ನಷ್ಟವಾಗಿರುವುದು ಮಯಾಂಕ್ ಅಗರ್ವಾಲ್ ಗೆ. ಮಯಾಂಕ್ ಇನ್ನೂ ಎ ತಂಡದಲ್ಲಿ ಆಡಿಲ್ಲ. ಇದೇ ಕಾರಣಕ್ಕೆ ಅವರನ್ನು ಉತ್ತಮ ಫಾರ್ಮ್ ನ ಹೊರತಾಗಿಯೂ ರಾಷ್ಟ್ರೀಯ ತಂಡಕ್ಕೆ ಪರಿಗಣಿಸಲಾಗುತ್ತಿಲ್ಲ. ಇದು ಕೆಲವರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments