Select Your Language

Notifications

webdunia
webdunia
webdunia
webdunia

ಬಿಜೆಪಿ ಯುವ ಮೋರ್ಚಾ ಸಭೆಗೆ ಕ್ರಿಕೆಟಿಗ ರಾಹುಲ್ ದ್ರಾವಿಡ್? ವಾಲ್ ಕೊಟ್ರು ಸ್ಪಷ್ಟನೆ

ಬಿಜೆಪಿ ಯುವ ಮೋರ್ಚಾ ಸಭೆಗೆ ಕ್ರಿಕೆಟಿಗ ರಾಹುಲ್ ದ್ರಾವಿಡ್? ವಾಲ್ ಕೊಟ್ರು ಸ್ಪಷ್ಟನೆ
ಮುಂಬೈ , ಮಂಗಳವಾರ, 10 ಮೇ 2022 (18:20 IST)
ಮುಂಬೈ: ಹಿಮಾಚಲ ಪ್ರದೇಶದಲ್ಲಿ ಈ ವಾರಂತ್ಯದಲ್ಲಿ ನಡೆಯಲಿರುವ ಬಿಜೆಪಿ ಯುವ ಮೋರ್ಚಾ ಸಭೆಗೆ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಆಗಮಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಈಗ ಸ್ವತಃ ದ್ರಾವಿಡ್ ಸ್ಪಷ್ಟನೆ ಕೊಟ್ಟಿದ್ದಾರೆ.

ರಾಹುಲ್ ದ್ರಾವಿಡ್ ಸಾಮಾನ್ಯವಾಗಿ ರಾಜಕೀಯ ಬಿಡಿ, ಯಾವುದೇ ಸಾರ್ವಜನಿಕ ಸಮಾರಂಭದಲ್ಲೂ ಭಾಗವಹಿಸುವುದು ಅಪರೂಪ. ಆದರೆ ಈಗ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಬಗ್ಗೆ ವದಂತಿ ಹರಡಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿತ್ತು.

ಈ ಬಗ್ಗೆ ಸ್ವತಃ ದ್ರಾವಿಡ್ ಸ್ಪಷ್ಟನೆ ನೀಡಿದ್ದಾರೆ. ‘ಕೆಲವು ಮಾಧ‍್ಯಮಗಳಲ್ಲಿ ನಾನು ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವುದಾಗಿ ವರದಿಗಳಾಗಿತ್ತು. ಆದರೆ ಇದೆಲ್ಲವೂ ಸತ್ಯಕ್ಕೆ ದೂರವಾಗಿದ್ದು, ನಾನು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿವಾದಾತ್ಮಕ ತೀರ್ಪಿಗೆ ಬಲಿಯಾದ ರೋಹಿತ್ ಶರ್ಮಾ ಮೈದಾನದಲ್ಲೇ ಅಸಮಾಧಾನ