Webdunia - Bharat's app for daily news and videos

Install App

ತಂಡದಲ್ಲಿ ರಿಷಬ್ ಪಂತ್ ಸ್ಥಾನದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಕೋಚ್ ದ್ರಾವಿಡ್

Webdunia
ಸೋಮವಾರ, 20 ಜೂನ್ 2022 (10:10 IST)
ಬೆಂಗಳೂರು: ದ.ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಮೊದಲ ಬಾರಿಗೆ ಟೀಂ ಇಂಡಿಯಾವನ್ನು ಮುನ್ನಡೆಸಿದ್ದ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ವೈಯಕ್ತಿಕವಾಗಿ ಫಾರ್ಮ್ ಕೊರತೆ ಅನುಭವಿಸಿದ್ದರು. ಇದರಿಂದಾಗಿ ರಿಷಬ್ ರನ್ನು ಮುಂದೆ ತಂಡದಿಂದ ಕಿತ್ತು ಹಾಕಬೇಕು ಎಂಬ ಕೂಗೂ ಕೇಳಿಬಂದಿತ್ತು.

ಇತ್ತೀಚೆಗೆ ದಿನೇಶ್ ಕಾರ್ತಿಕ್ ಕ್ಲಿಕ್ ಆಗುತ್ತಿರುವುದರಿಂದ ಸೀನಿಯರ್ಸ್ ತಂಡಕ್ಕೆ ಬಂದ ಮೇಲೆ ರಿಷಬ್ ಬದಲಿಗೆ ದಿನೇಶ್ ಕಾರ್ತಿಕ್ ರನ್ನೇ ವಿಕೆಟ್ ಕೀಪರ್ ಆಗಿಯೂ ಬಳಸಿಕೊಳ್ಳಬೇಕು ಎಂಬ ಮಾತು ಕೇಳಿಬರುತ್ತಿತ್ತು. ಈ ಬಗ್ಗೆ ನಿನ್ನೆಯ ಪಂದ್ಯದ ಬಳಿಕ ಕೋಚ್ ರಾಹುಲ್ ದ್ರಾವಿಡ್ ಮಹತ್ವದ ಹೇಳಿಕೆ ನೀಡಿದ್ದಾರೆ.

‘ರಿಷಬ್ ಪಂತ್ ಐಪಿಎಲ್ ನಲ್ಲಿ ಉತ್ತಮ ಆಟವಾಡಿದ್ದರು. ಅವರು ತಮ್ಮ ಶೈಲಿಯಲ್ಲಿ ಬ್ಯಾಟು ಬೀಸಲಿ ಎಂಬುದೇ ನಮ್ಮೆಲ್ಲರ ಬಯಕೆ. ಐಪಿಎಲ್ ನ ಫಾರ್ಮ್ ನ್ನು ಅಂತಾರಾಷ್ಟ್ರೀಯ ಪಂದ್ಯಗಳಲ್ಲೂ ಮುಂದುವರಿಸುತ್ತಾರೆ ಎಂಬ ನಂಬಿಕೆಯಿದೆ. ಮೂರು-ನಾಲ್ಕು ಪಂದ್ಯಗಳಲ್ಲಿ ಅವರು ವಿಫಲರಾಗಿರಬಹುದು. ಹಾಗಂತ ಅವರನ್ನು ಕಡೆಗಣಿಸಲಾಗದು. ರಿಷಬ್ ಈಗಲೂ ನಮ್ಮ ತಂಡದ ಭಾಗವಾಗಿಯೇ ಇದ್ದಾರೆ’ ಎಂದು ದ್ರಾವಿಡ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments