Publish Date: Sun, 28 Aug 2022 (10:41 IST)
Updated Date: Sun, 28 Aug 2022 (10:43 IST)
ದುಬೈ: ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಕೊರೋನಾ ಸೋಂಕಿಗೊಳಗಾಗಿದ್ದ ಕೋಚ್ ರಾಹುಲ್ ದ್ರಾವಿಡ್ ಚೇತರಿಸಿಕೊಂಡಿದ್ದಾರೆ.
ನೆಗೆಟಿವ್ ವರದಿ ಬಂದ ಬೆನ್ನಲ್ಲೇ ದ್ರಾವಿಡ್ ಟೀಂ ಇಂಡಿಯಾಕ್ಕೆ ಸೇರ್ಪಡೆಯಾಗಿದ್ದಾರೆ. ಇದಕ್ಕಾಗಿ ನಿನ್ನೆಯೇ ಅವರು ದುಬೈಗೆ ತಲುಪಿದ್ದಾರೆ. ಹೀಗಾಗಿ ಭಾರತ-ಪಾಕಿಸ್ತಾನ ಪಂದ್ಯಕ್ಕೆ ದ್ರಾವಿಡ್ ತಂಡದ ಜೊತೆಗಿರಲಿದ್ದಾರೆ.
ದ್ರಾವಿಡ್ ಗೆ ಆಗಸ್ಟ್ 23 ರಂದು ಕೊರೋನಾ ಸೋಂಕು ಇರುವುದು ಖಚಿತವಾಗಿತ್ತು. ಹೀಗಾಗಿ ತಂಡದ ಜೊತೆ ಯುಎಇಗೆ ಅವರು ಪ್ರಯಾಣ ಬೆಳೆಸಿರಲಿಲ್ಲ. ಅವರ ಅನುಪಸ್ಥಿತಿಯಲ್ಲಿ ವಿವಿಎಸ್ ಲಕ್ಷ್ಮಣ್ ಕೋಚ್ ಜವಾಬ್ಧಾರಿ ವಹಿಸಿಕೊಂಡಿದ್ದರು.