Webdunia - Bharat's app for daily news and videos

Install App

ಇಶಾಂತ್ ಕಿಶನ್ ಗೆ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ ರಾಹುಲ್ ದ್ರಾವಿಡ್

Krishnaveni K
ಮಂಗಳವಾರ, 6 ಫೆಬ್ರವರಿ 2024 (09:18 IST)
ವಿಶಾಖಪಟ್ಟಣಂ: ತಮ್ಮ ಸೂಚನೆ ಉಲ್ಲಂಘಿಸಿ ರಣಜಿ ಟ್ರೋಫಿ ಪಂದ್ಯಾವಳಿ ತಪ್ಪಿಸಿಕೊಳ್ಳುತ್ತಿರುವ ವಿಕೆಟ್ ಕೀಪರ್ ಬ್ಯಾಟಿಗ ಇಶಾನ್ ಕಿಶನ್ ಗೆ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಖಡಕ್ ಸಂದೇಶ ಕೊಟ್ಟಿದ್ದಾರೆ.

ದ.ಆಫ್ರಿಕಾ ಸರಣಿಯಿಂದ ಹಿಂದೆ ಸರಿದು ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದ ಇಶಾನ್ ಕಿಶನ್ ಮೇಲೆ ಬಿಸಿಸಿಐ ಗರಂ ಆಗಿತ್ತು. ಇದಾದ ಬಳಿಕ ಕೋಚ್ ದ್ರಾವಿಡ್ ಮರಳಿ ತಂಡಕ್ಕೆ ಸೇರ್ಪಡೆಯಾಗಬೇಕಾದರೆ ರಣಜಿ ಟ್ರೋಫಿ ಆಡಿ ಫಿಟ್ನೆಸ್ ಸಾಬೀತುಪಡಿಸಿ ಎಂದಿದ್ದರು. ನೇರವಾಗಿ ಸಂದೇಶ ನೀಡಿದರೂ ಇಶಾನ್ ತಮ್ಮ ತವರು ಜಾರ್ಖಂಡ್ ಪರ ಒಂದೇ ಒಂದು ಪಂದ್ಯವಾಡಿಲ್ಲ.

ರಣಜಿ ತಪ್ಪಿಸಿಕೊಂಡ ಇಶಾನ್ ಮೇಲೆ ದ್ರಾವಿಡ್ ಗರಂ
ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ರಾಹುಲ್ ದ್ರಾವಿಡ್ ಗೆ ಇಶಾನ್ ಕಿಶನ್ ಕುರಿತು ಪ್ರಶ್ನೆ ಕೇಳಲಾಯಿತು. ಇಶಾನ್ ಕಿಶನ್ ವಾಪಸಾತಿ ಯಾವಾಗ ಎಂಬ ಪ್ರಶ್ನೆಗೆ ದ್ರಾವಿಡ್ ಖಡಕ್ ಸಂದೇಶ ಕೊಟ್ಟಿದ್ದಾರೆ. ವಿಶ್ರಾಂತಿಯಲ್ಲಿರುವ ಇಶಾನ್ ಮತ್ತೆ ದೇಶೀಯ ಕ್ರಿಕೆಟ್ ನಲ್ಲಿ ಆಡಬೇಕು. ಆ ನಂತರವೇ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬೇಕೋ ಬೇಡವೋ ಎಂದು ನಿರ್ಧರಿಸಲಾಗುತ್ತದೆ ಎಂದು ನೇರವಾಗಿ ಹೇಳಿದ್ದಾರೆ.

ಟೀಂ ಇಂಡಿಯಾ ಜೊತೆ ಇಶಾನ್ ಸಂಪರ್ಕದಲ್ಲಿದ್ದಾರೆ. ಅವರ ಕೋರಿಕೆಯಂತೆ ರಜೆ ಮಂಜೂರು ಮಾಡಲಾಗಿತ್ತು. ಆದರೆ ಈಗ ತಂಡಕ್ಕೆ ಮರಳಬೇಕಾದರೆ ದೇಶೀಯ ಕ್ರಿಕೆಟ್ ನಲ್ಲಿ ಆಡಬೇಕಾಗುತ್ತದೆ ಎಂದಿದ್ದಾರೆ. ಆದರೆ ಇಶಾನ್ ಇನ್ನೂ ದೇಶೀಯ ಕ್ರಿಕೆಟ್ ಆಡಿಲ್ಲ. ಅವರು ಇನ್ನೂ ವಿಶ್ರಾಂತಿಯಲ್ಲಿದ್ದಾರೆ. ಇಶಾನ್ ತಾನು ಯಾವಾಗ ಆಡಲು ಸಿದ್ಧ ಎಂದು ತೀರ್ಮಾನಿಸಬೇಕು ಎಂದಿದ್ದಾರೆ.

ಇಂಗ್ಲೆಂಡ್ ವಿರುದ್ಧ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ಆಡಿದ್ದರು. ಆದರೆ ಅವರು ಬ್ಯಾಟಿಂಗ್ ನಲ್ಲಿ ದಯನೀಯ ವೈಫಲ್ಯ ಅನುಭವಿಸಿದ್ದರು. ಅಲ್ಲದೆ ಕೀಪಿಂಗ್ ನಲ್ಲೂ ಹೇಳಿಕೊಳ್ಳುವ ಸಾಧನೆ ಮಾಡಿಲ್ಲ. ಹೀಗಾಗಿ ಫ್ಯಾನ್ಸ್ ಇಶಾನ್ ಕಿಶನ್ ರನ್ನು ನೆನೆಸಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments