ಇನ್ನೇನು ಭಾರತ ಮೇಲುಗೈ ಸಾಧಿಸಿತೆಂದಾಗ ಆಸ್ಟ್ರೇಲಿಯಾ ನೆರವಿಗೆ ಬಂದ ಮಳೆ!

Webdunia
ಶನಿವಾರ, 8 ಡಿಸೆಂಬರ್ 2018 (08:59 IST)
ಅಡಿಲೇಡ್: ಆಸ್ಟ್ರೇಲಿಯಾ ಟಿ 20 ಸರಣಿಯುದ್ದಕ್ಕೂ ಟೀಂ ಇಂಡಿಯಾ ಪಾಲಿಗೆ ದಿ ವಿಲನ್ ಆಗಿದ್ದ ವರುಣ ಇದೀಗ ಟೆಸ್ಟ್ ಸರಣಿಯಲ್ಲೂ ವಕ್ಕರಿಸಿಕೊಂಡಿದ್ದಾನೆ.


ತೃತೀಯ ದಿನ ಆಸ್ಟ್ರೇಲಿಯಾವನ್ನು ಮೊದಲ ಇನಿಂಗ್ಸ್ ನಲ್ಲಿ 235 ಆಲೌಟ್ ಮಾಡಿ ಅಲ್ಪ ಮುನ್ನಡೆಯೊಂದಿಗೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದ ಭಾರತಕ್ಕೆ ವರುಣ ಅಡ್ಡಿಯಾಗಿದ್ದಾನೆ. ಅಡಿಲೇಡ್ ಮೈದಾನದಲ್ಲಿ ಮಳೆ ಸುರಿಯುತ್ತಿರುವುದರಿಂದ ಪಂದ್ಯ ಸದ್ಯದ ಮಟ್ಟಿಗೆ ಸ್ಥಗಿತಗೊಂಡಿದೆ.

ನಿನ್ನೆ 191 ಕ್ಕೆ 7 ವಿಕೆಟ್ ಕಳೆದುಕೊಂಡು ದಿನದಾಟ ಮುಗಿಸಿದ್ದ ಆಸೀಸ್ ಇಂದು 44 ರನ್ ಸೇರಿಸಿ ಆಲೌಟ್ ಆಯಿತು. ಇಂದು ಭಾರತದ ಪರ ಮೊಹಮ್ಮದ್ ಶಮಿ 2 ವಿಕೆಟ್ ಕಿತ್ತರು. ಇದರೊಂದಿಗೆ ಟೀಂ ಇಂಡಿಯಾಗೆ 15 ರನ್ ಗಳ ಮೊದಲ ಇನಿಂಗ್ಸ್ ಮುನ್ನಡೆ ಲಭಿಸಿದೆ. ಪಿಚ್ ಸ್ಥಿತಿ ನೋಡಿದರೆ ಇದು ಭಾರತಕ್ಕೆ ಉಪಯುಕ್ತ ಮುನ್ನಡೆಯಾಗಿತ್ತು. ಆದರೆ ಇದೀಗ ಭಾರೀ ಮಳೆಯಾಗುತ್ತಿದ್ದು, ಭಾರತಕ್ಕೆ ಶಾಪವಾಗಿ ಕಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ರೊಮಾರಿಯೋ ಶೆಫರ್ಡ್ ಹೇಗೆ ಬ್ಯಾಟಿಂಗ್ ಮಾಡ್ತಾರೆ, ಕೊಹ್ಲಿ ತೋರಿಸ್ತಾರೆ ನೋಡಿ

IPL 2026: ಮತ್ತೆ ಮೈದಾನದಲ್ಲಿ ಲಕ್ನೋ ಮಾಲಿಕ ಸಂಜೀವ್ ಗೊಯೆಂಕಾ ಶೋ, ರಿಷಭ್ ಪಂತ್ ಗೆ ಕ್ಲಾಸ್

IPL 2026: ಆರ್‌ಸಿಬಿಗೆ ಮುಂದಿನ ಎದುರಾಳಿ ಯಾರು, ಪಂದ್ಯದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದ ಬಳಿಕ ಶ್ರೇಯಸ್ ಅಯ್ಯರ್‌ಗೆ ಬಿತ್ತು ದಂಡದ ಬಿಸಿ, ಕಾರಣ ಇಲ್ಲಿದೆ

IPL 2026: ಮಾಡಿದ ಇದೊಂದು ತಪ್ಪಿಗೆ ಶುಭಮನ್ ಗಿಲ್ ಪಂದ್ಯ ಸೋಲುವಂತಾಯಿತು

ಮುಂದಿನ ಸುದ್ದಿ
Show comments