Webdunia - Bharat's app for daily news and videos

Install App

ಅಂಡರ್ 19 ವಿಶ್ವಕಪ್: ದ್ರಾವಿಡ್ ಹುಡುಗರಿಗೆ ಆತಂಕ ತಂದಿತ್ತ ಮಳೆ! ಕನಸಿಗೆ ತಣ್ಣೀರು ಬೀಳುತ್ತಾ?!

Webdunia
ಶನಿವಾರ, 3 ಫೆಬ್ರವರಿ 2018 (10:57 IST)
ಬೇ ಓವಲ್: ಅಂಡರ್ 19 ವಿಶ್ವಕಪ್ ಗೆದ್ದು ದಾಖಲೆ ಮಾಡಲು ಹೊರಟಿದ್ದ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದ ಭಾರತೀಯ ಕ್ರಿಕೆಟಿಗರಿಗೆ ಮಳೆ ಅಡ್ಡಗಾಲು ಹಾಕಿದೆ.
 

ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾವನ್ನು ಸಂಘಟಿತ ದಾಳಿ ಸಂಘಟಿಸಿ ಕೇವಲ 216 ರನ್ ಗೆ ಆಲೌಟ್ ಮಾಡಿದ್ದ ಭಾರತೀಯರು, ಆತ್ಮವಿಶ್ವಾಸದಿಂದಲೇ ಬ್ಯಾಟಿಂಗ್ ಆರಂಭಿಸಿದ್ದರು. ಗುರಿ ಬೆನ್ನತ್ತುತ್ತಿದ್ದ ಭಾರತೀಯರು 4 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 23 ರನ್ ಗಳಿಸಿದ್ದರು. ಆದರೆ ಅಷ್ಟರಲ್ಲಿ ಮಳೆ ಸುರಿಯಲಾರಂಭಿಸಿದೆ.

ಹೀಗಾಗಿ ಪಂದ್ಯ ಸದ್ಯಕ್ಕೆ ಸ್ಥಗಿತಗೊಂಡಿದೆ. ಮಳೆ ಬೇಗನೇ ನಿಲ್ಲದಿದ್ದರೆ ಡಕ್ ವರ್ತ್ ಲೂಯಿಸ್ ನಿಯಮದ ಅನುಸಾರ ಗೆಲುವಿಗೆ ಹೊಸ ಗುರಿ ನಿಗದಿಯಾಗಬಹುದು. ಅಥವಾ ಪಂದ್ಯ ರದ್ದಾದರೆ ಉಭಯ ತಂಡಗಳಿಗೆ ಸಮಾನ ಗೌರವ ಸಿಗಲಿದೆ. ಇದರಿಂದ ನಾಲ್ಕನೇ ಬಾರಿ ವಿಶ್ವಕಪ್ ಗೆದ್ದು ವಿಶ್ವದಾಖಲೆ ಮಾಡುವ ದ್ರಾವಿಡ್ ಹುಡುಗರ ಕನಸು ಭಗ್ನಗೊಳ್ಳಲಿದೆ. ಅಂತೂ ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯಕ್ಕೆ ಮಳೆ ಅಡ್ಡಿ ತಂದು ಭಾರತೀಯರಿಗೆ ನಿರಾಶೆ ತಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸರ್ಫರಾಜ್ ಖಾನ್ ಎರಡೇ ತಿಂಗಳಲ್ಲಿ 17 ಕೆಜಿ ತೂಕ ಇಳಿಸಿದ್ದು ಹೇಗೆ

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments