Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಅದ್ಭುತ ಬೌಲಿಂಗ್ ನಂತರ ಬ್ಯಾಟಿಂಗ್ ನಲ್ಲೂ ಮರೆಯುತ್ತಿರುವ ಕರ್ನಾಟಕ

Webdunia
ಗುರುವಾರ, 7 ಡಿಸೆಂಬರ್ 2017 (17:01 IST)
ನಾಗ್ಪುರ: ಮುಂಬೈ ವಿರುದ್ಧ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಬೌಲಿಂಗ್ ನಂತರ ಬ್ಯಾಟಿಂಗ್ ನಲ್ಲೂ ಅಬ್ಬರ ಮುಂದುವರಿಸಿದ್ದಾರೆ.
 

ಮೊದಲ ಇನಿಂಗ್ಸ್ ನಲ್ಲಿ ಮುಂಬೈ ತಂಡವನ್ನು 173 ರನ್ ಗಳಿಗೆ ಕಟ್ಟಿ ಹಾಕಿದ ಕರ್ನಾಟಕ ದಿನದಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿ ಆಟವಾಡುತ್ತಿತ್ತು. ಮುಂಬೈ ಮೊದಲ ಇನಿಂಗ್ಸ್ ನಲ್ಲಿ 100 ರನ್ ಗೆ ಆಲೌಟ್ ಆಗುವ ಭೀತಿಗೆ ಸಿಲುಕಿತ್ತು. ಆದರೆ ಧವಳ್ ಕುಲಕರ್ಣಿ ಅರ್ಧಶತಕ (75) ರನ್ ಬಾರಿಸಿ ತಂಡವನ್ನು ಆಧರಿಸಿದರು.

ಕರ್ನಾಟಕ ಪರ ನಾಯಕನ ಆಟವಾಡಿದ ವಿನಯ್ ಕುಮಾರ್ 6 ವಿಕೆಟ್ ಕಬಳಿಸಿದರು. ಎಸ್ ಅರವಿಂದ್ 2 ವಿಕೆಟ್ ಪಡೆದರು. ಇದೀಗ ಮೊದಲ ಇನಿಂಗ್ಸ್ ಆರಂಭಿಸಿರುವ ಕರ್ನಾಟಕ ಪರ ಆರಂಭಿಕ ರವಿಕಾಂತ್ ಸಮರ್ಥ್ 40 ರನ್ ಗಳಿಸಿ ಔಟಾಗಿದ್ದಾರೆ. ಇದೀಗ ಮಯಾಂಕ್ ಅಗರ್ವಾಲ್ 62 ರನ್ ಮತ್ತು ಎಂಕೆ ಅಬ್ಬಾಸ್ 12 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. ಮೊದಲ ಇನಿಂಗ್ಸ್ ಮೊತ್ತ ದಾಟಲು ಕರ್ನಾಟಕಕ್ಕೆ 58 ರನ್ ಬೇಕಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments