Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕ ಹುಡುಗರ ದಿಲ್ಲಿ ದರ್ಬಾರ್

Webdunia
ಭಾನುವಾರ, 12 ನವೆಂಬರ್ 2017 (17:34 IST)
ಬೆಂಗಳೂರು: ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಮತ್ತು ದೆಹಲಿ ನಡುವಿನ ಪಂದ್ಯ ನೀರಸ ಡ್ರಾ ಕಂಡಿದೆ. ಕರ್ನಾಟಕದ ಹುಡುಗರ ದಿಟ್ಟ ಬ್ಯಾಟಿಂಗ್ ಪ್ರದರ್ಶನದ ಹೊರತಾಗಿಯೂ ದೆಹಲಿ ಪಂದ್ಯ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

 
ಕರ್ನಾಟಕ ಪ್ರಥಮ ಇನಿಂಗ್ಸ್ ನಲ್ಲಿ 649 ರ ಬೃಹತ್ ಮೊತ್ತ ಪೇರಿಸಿತ್ತು. ಇದಕ್ಕೆ ಉತ್ತರವಾಗಿ ದೆಹಲಿ ತಂಡ ಆರಂಭಿಕ ಗೌತಮ್ ಗಂಭೀರ್ ಶತಕದ (144) ನೆರವಿನಿಂದ 301 ರನ್ ಗಳಿಸಿತು. ದ್ವಿತೀಯ ಇನಿಂಗ್ಸ್ ನಲ್ಲಿ ಮತ್ತೆ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಕರ್ನಾಟಕ ಅಂತಿಮ ದಿನದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 235 ರನ್ ಗಳಿಸಿತ್ತು.

ಕೆಎಲ್ ರಾಹುಲ್ 92 ರನ್ ಗಳಿಸಿ ರನೌಟ್ ಆಗುವ ಮೂಲಕ ಶತಕ ವಂಚಿತರಾದರು. ಕರ್ನಾಟಕದ ಪರ ದೆಹಲಿ ಪ್ರಥಮ ಇನಿಂಗ್ಸ್ ನಲ್ಲಿ ಅಭಿಮನ್ಯು ಮಿಥುನ್ 5 ವಿಕೆಟ್ ಕಬಳಿಸಿದರೆ, ಸ್ಟುವರ್ಟ್ ಬಿನ್ನಿ 2 ವಿಕೆಟ್ ಕಿತ್ತರು. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಬಿನ್ನಿ ಪಂದ್ಯ ಶ್ರೇಷ್ಠರಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments