Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಮತ್ತೆ ಸೆಮಿಫೈನಲ್ ಥ್ರಿಲ್ಲರ್ ಸೋತ ಕರ್ನಾಟಕ ಹುಡುಗರು

Webdunia
ಗುರುವಾರ, 21 ಡಿಸೆಂಬರ್ 2017 (10:33 IST)
ಕೋಲ್ಕೊತ್ತಾ: ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ದಿಡೀರ್ ಕುಸಿತದಿಂದಾಗಿ ಆತಂಕದ ಸುಳಿಗೆ ಸಿಲುಕಿದ್ದ ಕರ್ನಾಟಕ ರಣಜಿ ತಂಡ ಕೊನೆಗೂ ಕಳೆದ ವರ್ಷದ ಸೆಮಿಫೈನಲ್ ನಲ್ಲಿ ಮಾಡಿದಂತೆ ಸೋತು ನಿರಾಸೆ ಅನುಭವಿಸಿದೆ.
 

ವಿದರ್ಭ ತಂಡದ ಎದುರು ಕೇವಲ 5 ರನ್ ಗಳಿಂದ ಸೋತು ಆರು ಬಾರಿಯ ಚಾಂಪಿಯನ್ ಕರ್ನಾಟಕ ಇದೀಗ ಏಳನೇ ಬಾರಿಗೆ ರಣಜಿ ಸುಲ್ತಾನನಾಗುವ ಕನಸಿಗೆ ತಣ್ಣೀರು ಹಾಕಿಕೊಂಡಿದೆ. ಈ ಋತುವಿನಾದ್ಯಂತ ಅತ್ಯುತ್ತಮ ಪ್ರದರ್ಶನ ನೀಡಿದ್ದ ಕರ್ನಾಟಕ ಹುಡುಗರು ಸೆಮಿಫೈನಲ್ ನಲ್ಲಿ ಎಡವಿದರು. ವಿಶೇಷವೆಂದರೆ ವಿದರ್ಭಕ್ಕೆ ಇದು ಚೊಚ್ಚಲ ರಣಜಿ ಫೈನಲ್.

ಇದರಿಂದಾಗಿ ಗೆಲುವಿಗೆ 198 ರನ್ ಗಳ ಗುರಿ ಪಡೆದ ಕರ್ನಾಟಕ ಒಂದು ಹಂತದಲ್ಲಿ ಹೀನಾಯ ಸೋಲಿನ ಭೀತಿಗೆ ಸಿಲುಕಿತ್ತು. ಪ್ರಮುಖ ಬ್ಯಾಟ್ಸ್ ಮನ್ ಗಳು ಕನಿಷ್ಠ ಮೊತ್ತಕ್ಕೆ ಔಟಾಗಿ ಪೆವಿಲಿಯನ್ ಸೇರಿಕೊಂಡಿದ್ದರು. ಆದರೆ ಕೊನೆಯಲ್ಲಿ ನಾಯಕ 36 ರನ್ ಗಳಿಸಿ ತಂಡಕ್ಕೆ ಆಧಾರವಾದರು.

ಆದರೆ ಕೊನೆಯ ಕ್ರಮಾಂಕದಲ್ಲಿ ಬಂದ ಅಭಿಮನ್ಯು ಮಿಥುನ್ ಮತ್ತು ಶ್ರೇಯಸ್ ಗೋಪಾಲ್ ಅತ್ಯುತ್ತಮ ಬ್ಯಾಟಿಂಗ್ ಮಾಡಿ ಗೆಲುವಿನ ಆಸೆ ಚಿಗುರಿಸಿದರು. ಆದರೆ ಕೊನೆಯ ಕ್ಷಣದಲ್ಲಿ ಎಡವಿದ ಮಿಥುನ್ ರಾಜನೀಶ್ ಗುರ್ಬಾನಿ ಅವರ 6 ನೇ ಬಲಿಯಾದರು.  ಮಿಥುನ್ 26 ಎಸೆತಗಳಲ್ಲಿ 33 ರನ್ ಗಳಿಸಿ ಔಟಾದರು. ಆಗ ಕರ್ನಾಟಕಕ್ಕೆ ಗೆಲುವಿಗೆ 9 ರನ್ ಬೇಕಾಗಿತ್ತು. ವಿದರ್ಭಕ್ಕೆ ಚೊಚ್ಚಲ ರಣಜಿ ಫೈನಲ್ ಗೇರಲು 1 ವಿಕೆಟ್ ಸಾಕಿತ್ತು.

ಈ ಸಂದರ್ಭದಲ್ಲಿ ಶ್ರೀನಾಥ್ ಅರವಿಂದ್ ಗೆಲುವಿಗೆ 6 ರನ್ ಬೇಕಿದ್ದಾಗ ರಜನೀಶ್ ಗೆ 7 ನೆಯವರಾಗಿ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ವಿದರ್ಭ ಆಟಗಾರರ ಸಂಭ್ರಮ ಮುಗಿಲು ಮುಟ್ಟಿತು. ಕರ್ನಾಟಕ ಹುಡುಗರು ಕೈಗೆ ಬಂದ ತುತ್ತು ಬಾಯಿಗೆ ಬಾರದ ನಿರಾಸೆಯಲ್ಲಿ ಮುಳುಗಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments