Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಮಯಾಂಕ್ ಅಗರ್ವಾಲ್ ಗೆ ದ್ವಿಶತಕ ಜಸ್ಟ್ ಮಿಸ್

Webdunia
ಶುಕ್ರವಾರ, 10 ನವೆಂಬರ್ 2017 (16:51 IST)
ಬೆಂಗಳೂರು: ದೆಹಲಿ ವಿರುದ್ಧದ  ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ತಂಡ 649 ರನ್ ಗಳ ಬೃಹತ್ ಮೊತ್ತ ಪೇರಿಸಿದ್ದು, ಮಯಾಂಕ್ ಅಗರ್ವಾಲ್ ಸ್ವಲ್ಪದರಲ್ಲೇ ದ್ವಿಶತಕ ವಂಚಿತರಾದರು.

 
ನಿನ್ನೆ 348 ಕ್ಕೆ 4 ವಿಕೆಟ್ ಕಳೆದುಕೊಂಡು ದಿನದಾಟ ಮುಗಿಸಿದ್ದ ಕರ್ನಾಟಕ ಇಂದು ಪ್ರಥಮ ಇನಿಂಗ್ಸ್ ನಲ್ಲಿ 649 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ನಿನ್ನೆ ಅಜೇಯರಾಗುಳಿದಿದ್ದ ಮಯಾಂಕ್ ಅಗರ್ವಾಲ್ 176 ರನ್ ಗಳಿಸಿ ರನೌಟ್ ಆದರೆ, ಸ್ಟುವರ್ಟ್ ಬಿನ್ನಿ ಶತಕ (118) ಗಳಿಸಿದರು.

ಇಂದು ಕರ್ನಾಟಕಕ್ಕೆ ಆಸರೆಯಾಗಿದ್ದ ಬಿನ್ನಿಗೆ ಆಸರೆ ನೀಡಿದ ಶ್ರೇಯಸ್ ಗೋಪಾಲ್ 92 ರನ್ ಗಳಿಸಿ ಔಟಾದರು. ಅಭಿಮನ್ಯು ಮಿಥುನ್ 35 ರನ್ ಗಳಿಸಿ ಅಜೇಯರಾಗುಳಿದರು. ದಿನದಂತ್ಯಕ್ಕೆ ದೆಹಲಿ ಬ್ಯಾಟಿಂಗ್ ಆರಂಭಿಸಿದ್ದು ವಿಕೆಟ್ ನಷ್ಟವಿಲ್ಲದೇ 20 ರನ್ ಗಳಿಸಿದೆ. ಆರಂಭಿಕರಾದ ಗೌತಮ್ ಗಂಭೀರ್ 12 ಮತ್ತು ಉನ್ಮುಕ್ತ್ ಚಾಂದ್ 8 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸರ್ಫರಾಜ್ ಖಾನ್ ಎರಡೇ ತಿಂಗಳಲ್ಲಿ 17 ಕೆಜಿ ತೂಕ ಇಳಿಸಿದ್ದು ಹೇಗೆ

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments