Webdunia - Bharat's app for daily news and videos

Install App

ರಣಜಿ ಟ್ರೋಫಿ ಪಂದ್ಯ: ಕರ್ನಾಟಕದ ಮೇಲುಗೈ

Webdunia
ಗುರುವಾರ, 20 ಅಕ್ಟೋಬರ್ 2016 (09:31 IST)
ಕೋಲ್ಕತ್ತಾ: ರಣಜಿ ಟ್ರೋಫಿ ಪಂದ್ಯಾವಳಿಯ ಮೂರನೇ ಹಂತದ ಬಿ ಗುಂಪಿನ ಪಂದ್ಯದಲ್ಲಿ ಕರ್ದೆನಾಟಕದ ಮಾರಕ ದಾಳಿಗೆ ಕುಸಿದ ದೆಹಲಿ ಕೇವಲ 90 ರನ್ನುಗಳಿಗೆ ಆಲೌಟ್ ಆಗಿದೆ.

ಈಡನ್ ಗಾರ್ಡನ್ ಮೈದಾನದಲ್ಲಿ ಟಾಸ್ ಗೆದ್ದ ಕರ್ನಾಟಕ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ದೆಹಲಿ ಕರ್ನಾಟಕದ ಎಸ್. ಅರವಿಂದ್ (4 ವಿಕೆಟ್), ಹಾಗೂ ಕೆ. ಗೌತಮ್ (3 ವಿಕೆಟ್) ಮಾರಕ ದಾಳಿಗೆ  35.5 ಓವರ್ ಗಳಲ್ಲಿ ಕೇವಲ 90 ರನ್ ಗಳಿಸಲಷ್ಟೇ ಶಕ್ತವಾಯಿತು. ಅಭಿಮನ್ಯು ಮಿಥುನ್ ಎರಡು ವಿಕೆಟ್ ಕಿತ್ತರು.

ದೆಹಲಿ ಪರ ಗೌತಮ್ ಗಂಭೀರ್ ಕೇವಲ 2 ರನ್ನುಗಳಿಗೆ ಔಟಾದರೆ ರಿಷಬ್ ಪಂತ್ ಹಾಗೂ ದ್ರುವ್ ಶೋರೆ ತಲಾ 24 ರನ್ನು ಗಳಿಸಿದರು.

ಕರ್ನಾಟಕದ ಪರ ನಾಯಕ ವಿನಯ್ ಕುಮಾರ್ ಈ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದ ಆಡುತ್ತಿಲ್ಲ. ಅವರ ಸ್ಥಾನದಲ್ಲಿ ಕರುಣ್ ನಾಯರ್ ನಾಯಕತ್ವ ವಹಿಸಿಕೊಂಡಿದ್ದಾರೆ.

ವಿನಯ್ ಕುಮಾರ್ ನಾಯಕತ್ವದಲ್ಲಿ ಈಗಾಗಲೇ ಕರ್ನಾಟಕ ತನ್ನ ಮೊದಲ ಪಂದ್ಯವನ್ನು ಜಾರ್ಖಂಡ್ ವಿರುದ್ಧ ಡ್ರಾ ಮಾಡಿಕೊಂಡು ಮೂರು ಅಂಕ ಗಳಿಸಿಕೊಂಡಿತ್ತು. ದೆಹಲಿ ವಿರುದ್ಧ ಪಂದ್ಯ ಗೆಲ್ಲುವ ಉತ್ಸಾಹದಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments