Select Your Language

Notifications

webdunia
webdunia
webdunia
webdunia

ರಣಜಿ ಟ್ರೋಫಿ ಕ್ರಿಕೆಟ್: ಗುಜರಾತ್ ವಿರುದ್ಧ ಸ್ವಲ್ಪದರಲ್ಲೇ ಗೆಲುವು ಮಿಸ್ ಮಾಡಿಕೊಂಡ ಕರ್ನಾಟಕ

ರಣಜಿ ಟ್ರೋಫಿ ಕ್ರಿಕೆಟ್: ಗುಜರಾತ್ ವಿರುದ್ಧ ಸ್ವಲ್ಪದರಲ್ಲೇ ಗೆಲುವು ಮಿಸ್ ಮಾಡಿಕೊಂಡ ಕರ್ನಾಟಕ
ಸೂರತ್ , ಸೋಮವಾರ, 17 ಡಿಸೆಂಬರ್ 2018 (17:04 IST)
ಸೂರತ್: ಇಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಗುಜರಾತ್ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಂಡಿದೆ.


ದ್ವಿತೀಯ ಇನಿಂಗ್ಸ್ ನಲ್ಲಿ ಗೆಲುವಿಗೆ 173 ರನ್ ಗಳ ಗುರಿ ಬೆನ್ನತ್ತಿದ್ದ ಕರ್ನಾಟಕ ದ್ವಿತೀಯ ಇನಿಂಗ್ಸ್ ನಲ್ಲಿ ಉತ್ತಮವಾಗಿ ಬ್ಯಾಟ್ ಮಾಡುತ್ತಿತ್ತು. ಆದರೆ ಅಂತಿಮ ದಿನವಾದ ಇಂದು ದಿನದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಲಷ್ಟೇ ಶಕ್ತವಾಯಿತು.

ಇದರೊಂದಿಗೆ ಪಂದ್ಯ ಡ್ರಾ ಆಯಿತು. ಕರ್ನಾಟಕ ಪರ ದ್ವಿತೀಯ ಇನಿಂಗ್ಸ್ ನಲ್ಲಿ ಮಯಾಂಕ್ ಅಗರ್ವಾಲ್ 53 ‍ರನ್ ಸಿಡಿಸಿದ್ದರು. ಬೌಲಿಂಗ್ ಮತ್ತು ಬ್ಯಾಟಿಂಗ್ ನಲ್ಲಿ ಉತ್ತಮ ನಿರ್ವಹಣೆ ತೋರಿದ ಶ್ರೇಯಸ್ ಗೋಪಾಲ್ ಪಂದ್ಯ ಶ್ರೇಷ್ಠರಾದರು. ಕರ್ನಾಟಕಕ್ಕೆ ಮುಂದಿನ ಪಂದ್ಯ ರೈಲ್ವೇಸ್ ವಿರುದ್ಧ ಡಿಸೆಂಬರ್ 22 ರಿಂದ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಟ್ರೇಲಿಯಾ ವಿರುದ್ಧ ಸೋಲಿನ ಭೀತಿಯಲ್ಲಿ ಟೀಂ ಇಂಡಿಯಾ