Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕದ ದಾಳಿಗೆ ಮಹಾರಾಷ್ಟ್ರ ದೂಳೀಪಟ

Webdunia
ಗುರುವಾರ, 29 ನವೆಂಬರ್ 2018 (08:53 IST)
ಮೈಸೂರು: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಅತಿಥೇಯ ಕರ್ನಾಟಕ ಮಹಾರಾಷ್ಟ್ರದ ವಿರುದ್ಧ ಭರ್ಜರಿ ಆಟ ಪ್ರದರ್ಶಿಸಿದೆ.


ಮೊದಲು ಬ್ಯಾಟಿಂಗ್ ಮಾಡಿದ ಮಹಾರಾಷ್ಟ್ರವನ್ನು ಜುಜುಬಿ 113 ರನ್ ಗಳಿಗೆ ಆಲೌಟ್ ಮಾಡಿದ ಕರ್ನಾಟಕ ಆಟಗಾರರು ಬಳಿಕ ಮೊದಲ ದಿನದಂತ್ಯಕ್ಕೆ ಮೊದಲ ಇನಿಂಗ್ಸ್ ನಲ್ಲಿ 3 ವಿಕೆಟ್ ನಷ್ಟಕ್ಕೆ 70 ರನ್ ಗಳಿಸಿದ್ದಾರೆ. ಈ ಮೂಲಕ ಇನ್ನು ಮೊದಲ ಇನಿಂಗ್ಸ್ ಮೊತ್ತ ಸರಿಗಟ್ಟಲು ಕೇವಲ 43 ರನ್ ಬಾಕಿ ಉಳಿಸಿದ್ದಾರೆ.

ಕರ್ನಾಟಕ ಪರ ವೇಗಿಗಳಾದ ವಿನಯ್ ಕುಮಾರ್, ಅಭಿಮನ್ಯು ಮಿಥುನ್, ರೋಹಿತ್ ಮೋರೆ ತಲಾ 2 ವಿಕೆಟ್ ಕಬಳಿಸಿದರೆ ಜಗದೀಶ್ ಸುಚಿತ್ ನಾಲ್ಕು ವಿಕೆಟ್ ಉಡಾಯಿಸಿ ಎದುರಾಳಿಗಳ ಕುಸಿತಕ್ಕೆ ಕಾರಣರಾದರು. ಮಹಾರಾಷ್ಟ್ರ ಪರ ಋತುರಾಜ್ ಗಾಯಕ್ ವಾಡ್ 39, ರೋಹಿತ್ ಮೊಟ್ವಾನಿ 34, ಜಯ ಪಾಂಡೆ 20 ಮತ್ತು ಅನುಪಮ್ ಸಂಕೇಲ್ಚ 10 ರನ್ ಗಳಿಸಿದ್ದು ಬಿಟ್ಟರೆ ಉಳಿದವರು ಯಾರೂ ಎರಡಂಕಿ ದಾಟಲಿಲ್ಲ.

ಕರ್ನಾಟಕ ಪರ ದಿನದಂತ್ಯಕ್ಕೆ 32 ರನ್ ಗಳಿಸಿರುವ ದೇಗಾ ನಿಶ್ಚಲ್ ಮತ್ತು 2 ರನ್ ಗಳಿಸಿ ಜಗದೀಶ್ ಸುಚಿತ್ ಇಂದಿಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments