ದೆಹಲಿ: ರಣಜಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೊದಲ ಇನಿಂಗ್ಸ್ ನಲ್ಲಿ ಕಡಿಮೆ ಮೊತ್ತ ಗಳಿಸಿದ್ದ ಕರ್ನಾಟಕ ಬೌಲಿಂಗ್ ನಲ್ಲಿ ಉತ್ತಮ ದಾಳಿ ಸಂಘಟಿಸಿದೆ. ಕರ್ನಾಟಕದ 179 ರನ್ ಗಳಿಗೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿರುವ ಒಡಿಶಾ ಊಟದ ವಿರಾಮದ ವೇಳೆಗೆ 5 ವಿಕೆಟ್ ಕಳೆದುಕೊಂಡು 125 ರನ್ ಗಳಿಸಿದೆ.
ಇದರೊಂದಿಗೆ ಒಡಿಶಾ ಕರ್ನಾಟಕದ ಮೊದಲ ಇನಿಂಗ್ಸ್ ಮೊತ್ತದಿಂದ 54 ರನ್ ಹಿನ್ನಡೆಯಲ್ಲಿದೆ. ರಾಜ್ಯದ ಪರ ಎಸ್. ಗೋಪಾಲ್ 2 ವಿಕೆಟ್, ಎಸ್.ಅರವಿಂದ್ ಮತ್ತು ಕೆ. ಗೌತಮ್ ತಲಾ ಒಂದು ವಿಕೆಟ್ ಪಡೆದುಕೊಂಡರು. ಒಡಿಶಾ ನಾಯಕ ಗೋವಿಂದ್ ಪೊದಾರ್ 44 ರನ್ ಗಳಿಸಿ ಔಟಾಗಿದ್ದಾರೆ.
ಕರ್ನಾಟಕದ ಅಭಿಮನ್ಯು ಮಿಥುನ್ ಈ ಪಂದ್ಯದಲ್ಲಿ ಆಡುತ್ತಿಲ್ಲ. ನಾಯಕ ವಿನಯ್ ಕುಮಾರ್ 10 ಓವರ್ ಬೌಲಿಂಗ್ ಮಾಡಿದ್ದು, ಅಷ್ಟೊಂದು ಪರಿಣಾಮ ಬೀರಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ