Publish Date: Wed, 16 Jan 2019 (17:18 IST)
Updated Date: Wed, 16 Jan 2019 (17:19 IST)
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ರಾಜಸ್ಥಾನ ವಿರುದ್ಧ ಮೊದಲ ಇನಿಂಗ್ಸ್ ನಲ್ಲಿ ಅಲ್ಪ ಮುನ್ನಡೆ ಸಾಧಿಸಿದೆ.
ರಾಜಸ್ಥಾನ ಮೊದಲ ಇನಿಂಗ್ಸ್ ನಲ್ಲಿ 224 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 263 ಕ್ಕೆ ಆಲೌಟ್ ಆಯಿತು. ಇದರೊಂದಿಗೆ ಮೊದಲ ಇನಿಂಗ್ಸ್ ನಲ್ಲಿ 39 ರನ್ ಗಳ ಮುನ್ನಡೆ ದೊರೆಯಿತು.
ದಿನದಂತ್ಯಕ್ಕೆ ರಾಜಸ್ಥಾನ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದು, ವಿಕೆಟ್ ನಷ್ಟವಿಲ್ಲದೇ 11 ರನ್ ಗಳಿಸಿದೆ. ಇದರೊಂದಿಗೆ ಇನ್ನೂ 28 ರನ್ ಗಳ ಹಿನ್ನಡೆಯಲ್ಲಿದೆ. ಕರ್ನಾಟಕದ ಮೊದಲ ಇನಿಂಗ್ಸ್ ನಲ್ಲಿ ಕೆ ಸಿದ್ಧಾರ್ಥ್ 53 ಮತ್ತು ವಿನಯ್ ಕುಮಾರ್ ಔಟಾಗದೇ 83 ರನ್ ಗಳಿಸಿದರು. ಕರುಣ್ ನಾಯರ್, ಮನೀಶ್ ಪಾಂಡೆ ಮತ್ತೆ ವಿಫಲರಾದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ