Select Your Language

Notifications

webdunia
webdunia
webdunia
webdunia

ರಣಜಿ ಟ್ರೋಫಿ ಕ್ರಿಕೆಟ್: ಮಹಾರಾಷ್ಟ್ರ ವಿರುದ್ಧ ಗೆದ್ದ ಕರ್ನಾಟಕ

ರಣಜಿ ಟ್ರೋಫಿ ಕ್ರಿಕೆಟ್:  ಮಹಾರಾಷ್ಟ್ರ ವಿರುದ್ಧ ಗೆದ್ದ ಕರ್ನಾಟಕ
ಮೊಹಾಲಿ , ಶುಕ್ರವಾರ, 9 ಡಿಸೆಂಬರ್ 2016 (16:05 IST)
ಮೊಹಾಲಿ: ಮಹಾರಾಷ್ಟ್ರ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ 10 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ. ಗೆಲುವಿಗೆ 39 ರನ್ ಗಳ ಗುರಿ ಪಡೆದ ಕರ್ನಾಟಕ ವಿಕೆಟ್ ಕಳೆದುಕೊಳ್ಳದೇ ಗುರಿ ಸಾಧಿಸಿದೆ.

ದ್ವಿತೀಯ ಇನಿಂಗ್ಸ್ ನಲ್ಲಿ ಮಹಾರಾಷ್ಟ್ರ ತಂಡ 218 ಕ್ಕೆ ಆಲೌಟ್ ಆಗಿತ್ತು. ಮೊದಲ ಇನಿಂಗ್ಸ್ ನಲ್ಲಿ ಕರ್ನಾಟಕ 164 ರನ್ ಮುನ್ನಡೆ ಪಡೆದಿತ್ತು. ಗೆಲುವಿನ ಗುರಿ ಬೆನ್ನಟ್ಟಿದ ಕರ್ನಾಟಕದ ಆರಂಭಿಕರಾದ ಆರ್. ಸಮರ್ಥ್ ಮತ್ತು ಕೆ. ಅಬ್ಬಾಸ್ ವಿಕೆಟ್ ಕಳೆದುಕೊಳ್ಳದೇ ಗುರಿ ಮುಟ್ಟಿಸಿದರು.

ಕಳೆದ ಪಂದ್ಯ ಸೋತು ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಾರಿದ್ದ ಕರ್ನಾಟಕಕ್ಕೆ ಈ ಗೆಲುವು ಸಮಾಧಾನ ತಂದಿದೆ. ಇದರೊಂದಿಗೆ ಮಂಕಾಗಿದ್ದ ಕರ್ನಾಟಕ ಮತ್ತೆ ಹಳಿಗೆ ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಣಜಿ ಟ್ರೋಫಿ ಕ್ರಿಕೆಟ್: ಇಂದೇ ಗೆಲ್ಲಲಿದೆ ಕರ್ನಾಟಕ