ನವದೆಹಲಿ: ಒಡಿಶಾ ತಂಡದ ವಿರುದ್ಧ ನಡೆದ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕ ತಂಡ ಆರಂಭಿಕ ಆಘಾತ ಅನುಭವಿಸಿದೆ. ಊಟದ ವಿರಾಮದ ವೇಳೆಗೆ 3 ವಿಕೆಟ್ ಕಳೆದುಕೊಂಡು 72 ರನ್ ಗಳಿಸಿದೆ.
ಟಾಸ್ ಗೆದ್ದ ಒಡಿಶಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ಮಯಾಂಕ್ ಅಗರ್ ವಾಲ್ ಅವರನ್ನು ಬೇಗನೇ ಕಳೆದುಕೊಂಡಿತು. 58 ರನ್ ಗಳಿಸುವಷ್ಟರಲ್ಲಿ ಆರ್. ಸಮರ್ಥ್ ಮತ್ತು ರಾಬಿನ್ ಉತ್ತಪ್ಪ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು.
ಒಡಿಶಾ ಬೌಲಿಂಗ್ ಅಷ್ಟೊಂದು ಪರಿಣಾಮಕಾರಿಯಾಗಿಲ್ಲದಿದ್ದರೂ, ಚುರುಕಿನ ಕ್ಷೇತ್ರ ರಕ್ಷಣೆಯಿಂದ ಗಮನಸೆಳೆಯಿತು. ಸದ್ಯಕ್ಕೆ ಕ್ರೀಸ್ ನಲ್ಲಿ ಕೆ. ಅಬ್ಬಾಸ್ ಮತ್ತು ಸ್ಟುವರ್ಟ್ ಬಿನ್ನಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ