Select Your Language

Notifications

webdunia
webdunia
webdunia
webdunia

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕಕ್ಕೆ ಆರಂಭಿಕ ಆಘಾತ

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕಕ್ಕೆ ಆರಂಭಿಕ ಆಘಾತ
ಶಿವಮೊಗ್ಗ , ಮಂಗಳವಾರ, 4 ಫೆಬ್ರವರಿ 2020 (10:40 IST)
ಶಿವಮೊಗ್ಗ: ರಣಜಿ ಟ್ರೋಫಿ ಕ್ರಿಕೆಟ್ ಟ್ರೋಫಿಯ ಇಂದಿನಿಂದ ಆರಂಭವಾಗಿರುವ ಪಂದ್ಯದಲ್ಲಿ ಮಧ್ಯಪ್ರದೇಶ ವಿರುದ್ಧ ಕರ್ನಾಟಕ ಆರಂಭಿಕ ಆಘಾತ ಅನುಭವಿಸಿದೆ.


ಟಾಸ್ ಗೆದ್ದ ಮಧ‍್ಯಪ್ರದೇಶ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ತನ್ನ ಆಯ್ಕೆಯನ್ನು ಸಮರ್ಥಿಸುವ ರೀತಿಯಲ್ಲಿ ಮಧ್ಯಪ್ರದೇಶ ಮೊದಲ ಓವರ್ ನಲ್ಲಿಯೇ ಆರಂಭಿಕ ದೇವದತ್ತ ಪಡಿಕ್ಕಲ್ ರ ಅಮೂಲ್ಯ ವಿಕೆಟ್ ಕಿತ್ತು ಆರಂಭಿಕ ಆಘಾತ ನೀಡಿದೆ. ಪಡಿಕ್ಕಲ್ ಖಾತೆ ತೆರೆಯದೇ ನಿರ್ಗಮಿಸಿದರು.

ಇತ್ತೀಚೆಗಿನ ವರದಿ ಬಂದಾಗ ಕರ್ನಾಟಕ 2 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 8 ರನ್ ಗಳಿಸಿದೆ. ಆರಂಭಿಕ ರವಿಕಾಂತ್ ಸಮರ್ಥ್ ಖಾತೆ ತೆರೆಯಬೇಕಿದ್ದು, ರೋಹಿತ್ ಕದಂ ನಾಲ್ಕು ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕ್ವಾರ್ಟರ್ ಫೈನಲ್ ಹಂತಕ್ಕೇರಲು ಕರ್ನಾಟಕಕ್ಕೆ ಈ ಪಂದ್ಯದಲ್ಲಿ ಗೆಲುವು ಮಹತ್ವದ್ದಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಪಾಕ್ ನಡುವೆ ಇಂದು ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ ಪಂದ್ಯ