Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಜತೆಯಾಟ ಸಿಕ್ಕರೆ ಕರ್ನಾಟಕಕ್ಕೆ ಗೆಲುವು ಖಚಿತ

Webdunia
ಗುರುವಾರ, 17 ಜನವರಿ 2019 (17:22 IST)
ಬೆಂಗಳೂರು: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ರಾಜಸ್ಥಾನ ನೀಡಿದ 184 ರನ್ ಗಳ ಟಾರ್ಗೆಟ್ ಬೆನ್ನತ್ತಿದೆ.


ಮೂರನೇ ದಿನದಂತ್ಯಕ್ಕೆ ಕರ್ನಾಟಕಕ್ಕೆ ಗೆಲುವು ತೂಗುಯ್ಯಾಲೆಯಂತಾಗಿದೆ. ದ್ವಿತೀಯ ಇನಿಂಗ್ಸ್ ನಲ್ಲಿ ಆರಂಭಿಕ ಆಘಾತ ಅನುಭವಿಸಿರುವ ಕರ್ನಾಟಕ 3 ವಿಕೆಟ್ ನಷ್ಟಕ್ಕೆ 45 ರನ್ ಗಳಿಸಿದೆ. ಗೆಲುವಿಗೆ ಇನ್ನೂ 139 ರನ್ ಗಳಿಸಬೇಕಿದೆ.

ಕರ್ನಾಟಕ ಪರ ಆರಂಭಿಕರಾದ ದೇಗಾ ನಿಶ್ಚಲ್, ರವಿಕಾಂತ್ ಸಮರ್ಥ್ ತಲಾ 1 ಮತ್ತು 16 ರನ್ ಗಳಿಸಿ ಔಟಾದರು. ಕೆ ಸಿದ್ಧಾರ್ಥ್ ಕೂಡಾ ಕೇವಲ 5 ರನ್ ಗಳಿಗೆ ವಿಕೆಟ್ ಒಪ್ಪಿಸಿ ಕುಸಿತಕ್ಕೆ ಕಾರಣರಾದರು. ಇದೀಗ ಕರುಣ್ ನಾಯರ್ 18 ಮತ್ತು ರೋನಿತ್ ಮೋರೆ 8 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.  ಸಶಕ್ತ ಜತೆಯಾಟವಾಡಿದರೆ ಮಾತ್ರ ಗೆಲುವು ಸಾಧ್ಯ ಎಂಬ ಪರಿಸ್ಥಿತಿ ಕರ್ನಾಟಕಕ್ಕೆ ಎದುರಾಗಿದೆ. ನಾಳೆ ಒಂದು ದಿನದ ಆಟ ಬಾಕಿಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments