Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕಕ್ಕೆ ಕಂಟಕ ತಂದ ಚೇತೇಶ್ವರ ಪೂಜಾರ, ಅಂಪಾಯರ್ ಬಗ್ಗೆ ಆಕ್ರೋಶ

Webdunia
ಮಂಗಳವಾರ, 29 ಜನವರಿ 2019 (09:17 IST)
ಬೆಂಗಳೂರು: ಚೇತೇಶ್ವರ ಪೂಜಾರರನ್ನು ಔಟ್ ಮಾಡುವುದು ಅಷ್ಟು ಸುಲಭವಲ್ಲ. ಆದರೆ ಅವರನ್ನು ಔಟ್ ಮಾಡಿದರೂ ತೀರ್ಪು ಕೊಡದೇ ಖಳನಾಯಕನಾದ ಅಂಪಾಯರ್ ಬಗ್ಗೆ ಏನು ಹೇಳುವುದು. ಅದೂ ಎರಡೆರಡು ಬಾರಿ.


ಕರ್ನಾಟಕ ಮತ್ತು ಸೌರಾಷ್ಟ್ರ ನಡುವೆ ನಡೆದ ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ ಕರ್ನಾಟಕಕ್ಕೆ 5 ವಿಕೆಟ್ ಗಳ ಸೋಲಾಯಿತು. ಆದರೆ ಇಲ್ಲಿ ಸೋಲು-ಗೆಲುವಿಗಿಂತ ಅಂಪಾಯರ್ ಮತ್ತು ಸೌರಾಷ್ಟ್ರ ಸ್ಟಾರ್ ಆಟಗಾರ ಚೇತೇಶ್ವರ ಪೂಜಾರ ನಡತೆಯೇ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅದೂ ಪಂದ್ಯದ ಎರಡೂ ಇನಿಂಗ್ಸ್ ನಲ್ಲಿ ಪೂಜಾರ ಮೇಲೆ ಅಂಪಾಯರ್ ತೋರಿದ ಕೃಪೆ ಕರ್ನಾಟಕದ ಸೋಲಿಗೆ ಕಾರಣವಾಗಿದೆ.

ಮೊದಲ ಇನಿಂಗ್ಸ್ ನಲ್ಲಿ ಬ್ಯಾಟಿನ ಅಂಚಿಗೆ ತಗುಲಿದ್ದರೂ ಅಂಪಾಯರ್ ಔಟ್ ಕೊಡಲಿಲ್ಲ. ಇದು ತಿಳಿದೂ ಪೂಜಾರ ಕೂಡಾ ಜಂಟಲ್ ಮೆನ್ ನಡತೆ ತೋರದೇ ಇನಿಂಗ್ಸ್ ಮುಂದುವರಿಸಿದ್ದರು. ದ್ವಿತೀಯ ಇನಿಂಗ್ಸ್ ನಲ್ಲೂ ವಿನಯ್ ಕುಮಾರ್ ಬೌಲಿಂಗ್ ನಲ್ಲಿ ಮತ್ತೆ ಬ್ಯಾಟ್ ನ ಅಂಚಿಗೆ ಸವರಿ ಕೀಪರ್ ಕೈಗೆ ಬಾಲ್ ಸೇರಿತ್ತು.

ಆಗಲೂ ಅದೇ ಕತೆ. ಕರ್ನಾಟಕ ತಂಡದ ನಾಯಕ ಮನೀಶ್ ಪಾಂಡೆ ಅಂಗಲಾಚಿದರೂ ಪೂಜಾರ ಆಗಲೀ, ಅಂಪಾಯರ್ ಆಗಲೀ ಕಿವುಡರಾದರು. ಇದರಿಂದಾಗಿ ಇದೀಗ ಅಂಪಾಯರಿಂಗ್ ಗುಣಮಟ್ಟ ಮತ್ತು ಒಬ್ಬ ಹಿರಿಯ ಆಟಗಾರನಾಗಿ ಸನ್ನಡತೆ ಮರೆತ ಪೂಜಾರ ಬಗ್ಗೆ ಕರ್ನಾಟಕ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದೇನೇ ಇದ್ದರೂ ಕೊನೆಯಲ್ಲಿ ಮುಖ್ಯವಾಗುವುದು ಫಲಿತಾಂಶ ಮಾತ್ರ ಎನ್ನುವುದು ವಿಪರ್ಯಾಸ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

ಮುಂದಿನ ಸುದ್ದಿ
Show comments