Webdunia - Bharat's app for daily news and videos

Install App

ರಣಜಿ ಟ್ರೋಫಿ: ವಿದರ್ಭ ತಂಡದ ಎದುರು ಕರ್ನಾಟಕ ಕ್ರಿಕೆಟ್ ತಂಡಕ್ಕೆ ಮುನ್ನಡೆ

Webdunia
ಸೋಮವಾರ, 7 ನವೆಂಬರ್ 2016 (08:47 IST)
ವಡೋದರಾ: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ವಿದರ್ಭ ತಂಡದ ಎದುರು ಕರ್ನಾಟಕ ತಂಡ ಒಟ್ಟಾರೆ 199 ರನ್ ಮುನ್ನಡೆ ಸಾಧಿಸಿದೆ. ಇನ್ನೂ ಎರಡು ದಿನದ ಆಟ ಬಾಕಿಯಿದ್ದು, ಕರ್ನಾಟಕಕ್ಕೆ ಮತ್ತೊಂದು ಗೆಲುವಿನ ಆಸೆ ಚಿಗುರೊಡೆದಿದೆ.

ಎರಡನೇ ದಿನದ ಅಂತ್ಯಕ್ಕೆ ಕರ್ನಾಟಕ ಮೂರು ವಿಕೆಟ್ ನಷ್ಟಕ್ಕೆ 103 ರನ್ ಗಳಿಸಿದೆ. ಆರ್ ಸಮರ್ಥ್ (45 ರನ್) ಮತ್ತು ಸ್ಟುವರ್ಟ್ ಬಿನ್ನಿ (12) ಕ್ರೀಸ್ ನಲ್ಲಿದ್ದಾರೆ. ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 267 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ವಿದರ್ಭ ತಂಡ ಮೊದಲ ಇನಿಂಗ್ಸ್ ನಲ್ಲಿ 176 ಕ್ಕೆ ಆಲೌಟ್ ಆಗಿತ್ತು. ಇದರೊಂದಿಗೆ ರಾಜ್ಯ ತಂಡ ಅಲ್ಪ ಮೊತ್ತದ ಮುನ್ನಡೆ ಪಡೆದಿತ್ತು.

ದ್ವಿತೀಯ ಇನಿಂಗ್ಸ್ ನಲ್ಲಿ ಕರ್ನಾಟಕ ತನ್ನ ಮುನ್ನಡೆಯನ್ನು 199 ಕ್ಕೇರಿಸಿದೆ.  ಕರ್ನಾಟಕಕ್ಕೆ ಈ ಪಂದ್ಯದಲ್ಲಿ ಖಾಯಂ ನಾಯಕ ವಿನಯ್ ಕುಮಾರ್ ವಾಪಸ್ ಆಗಿದ್ದಾರೆ. ಕಳೆದ ಎರಡು ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದ ಕರುಣ್ ನಾಯರ್  ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಿಗಾಗಿ ಟೀಂ ಇಂಡಿಯಾ ಪರ ಆಡಲಿರುವುದರಿಂದ ಈ ಪಂದ್ಯದಲ್ಲಿ ರಾಜ್ಯ ತಂಡಕ್ಕೆ ಅವರ ಅನುಪಸ್ಥಿತಿ ಕಾಡುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: 21 ಟೆಸ್ಟ್, 16 ಬಾರಿ 50 ಪ್ಲಸ್ ರನ್, ಟೆಸ್ಟ್ ನಲ್ಲಿ ವೀರ ಯಶಸ್ವಿ ಜೈಸ್ವಾಲ್

IND vs ENG: ಟಾಸ್ ಗೆದ್ದಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಹಲವು ಬದಲಾವಣೆ

IND vs ENG: ಭಾರತ ಇಂಗ್ಲೆಂಡ್ ದ್ವಿತೀಯ ಟೆಸ್ಟ್ ಪಂದ್ಯದ ಪಿಚ್ ಯಾರಿಗೆ ಸಹಕಾರಿ

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ಮುಂದಿನ ಸುದ್ದಿ
Show comments