ಕೋಚ್ ಆಗಿ ಸಾಧಿಸಬೇಕಾಗಿದ್ದನ್ನು ಸಾಧಿಸಿದ್ದೇನೆ: ರವಿಶಾಸ್ತ್ರಿ ವಿದಾಯ ಮಾತು

Webdunia
ಸೋಮವಾರ, 8 ನವೆಂಬರ್ 2021 (20:35 IST)
ದುಬೈ: ಇಂದು ನಡೆಯುತ್ತಿರುವ ಭಾರತ-ನಮೀಬಿಯಾ ನಡುವಿನ ಟಿ20 ವಿಶ್ವಕಪ್ ನ ಲೀಗ್ ಪಂದ್ಯ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಪಾಲಿಗೆ ವಿದಾಯ ಪಂದ್ಯ.

ಇಂದಿನ ಪಂದ್ಯದ ಬಳಿಕ ಅವರು ಕೋಚ್ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ. ಸುದೀರ್ಘ ನಾಲ್ಕು ವರ್ಷಗಳ ಕಾಲ ಟೀಂ ಇಂಡಿಯಾಗೆ ಸೇವೆ ಸಲ್ಲಿಸಿದ ಬಳಿಕ ಮಾತನಾಡಿರುವ ರವಿಶಾಸ್ತ್ರಿ, ಕೋಚ್ ತಂಡಕ್ಕೆ ಬಂದಾಗ ಏನು ಸಾಧಿಸಬೇಕೆಂದುಕೊಂಡಿದ್ದೇನೋ ಅದನ್ನು ಸಾಧಿಸಿದ್ದೇನೆ ಎಂದಿದ್ದಾರೆ.

ನಾನೀಗ ಸುಸ್ತಾಗಿದ್ದೇನೆ. ನನ್ನ ವಯಸ್ಸೂ ಇದಕ್ಕೆ ಕಾರಣ. ಈ ತಂಡದಲ್ಲಿ ವಿರಾಟ್ ಕೊಹ್ಲಿ ಇನ್ನೂ ಇದ್ದಾರೆ. ಅವರ ಸೇವೆ ತಂಡಕ್ಕೆ ಮುಖ್ಯವಾಗಲಿದೆ. ಆಟಗಾರರೂ ಬಯೋ ಬಬಲ್ ವಾತಾವರಣದಿಂದ ಸಾಕಷ್ಟು ಬಳಲಿದ್ದಾರೆ. ಐಪಿಎಲ್ ಮತ್ತು ವಿಶ್ವಕಪ್ ನಡುವೆ ಸ್ವಲ್ಪ ಸಮಯದ ಅಂತರವಿದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದಿದ್ದಾರೆ.

ಇನ್ನು, ಮುಂದಿನ ಕೋಚ್ ಆಗಿ ಆಯ್ಕೆಯಾಗಿರುವ ರಾಹುಲ್ ದ್ರಾವಿಡ್ ಬಗ್ಗೆ ಹೊಗಳಿದ ಶಾಸ್ತ್ರಿ, ಅವರು ಶ್ರೇಷ್ಠ ತಂಡದ ನಾಯಕರಾಗಿ ತಮ್ಮನ್ನು ತಾವು ಸಾಬೀತುಪಡಿಸಿದವರು, ಈಗ ಕೋಚ್ ಆಗಿ ಅವರು ಆ ಸಾಧನೆಯನ್ನು ಇನ್ನಷ್ಟು ಹೆಚ್ಚಿಸುವ ಕೆಲಸವಷ್ಟೇ ಬಾಕಿಯಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

ಮುಂದಿನ ಸುದ್ದಿ
Show comments