Webdunia - Bharat's app for daily news and videos

Install App

ನಿವೃತ್ತಿ ಬಳಿಕ ರವಿಚಂದ್ರನ್ ಅಶ್ವಿನ್ ಏನ್ಮಾಡ್ತಿದ್ದಾರೆ, ರಿವೀಲ್ ಆಯ್ತು

Krishnaveni K
ಭಾನುವಾರ, 2 ಫೆಬ್ರವರಿ 2025 (09:21 IST)
Photo Credit: X
ಮುಂಬೈ: ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗಿಯಾಗಿದ್ದ ಟೀಂ ಇಂಡಿಯಾ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ನಿವೃತ್ತಿ ಬಳಿಕ ಏನು ಮಾಡುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸಿದ್ದಾರೆ.

ಇತ್ತೀಚೆಗಷ್ಟೇ ಅಶ್ವಿನ್ ಆಸ್ಟ್ರೇಲಿಯಾ ಸರಣಿ ನಡುವೆ ಅಂತಾರಾಷ್ಟ್ರೀಯ ವೃತ್ತಿ ಬದುಕಿಗೆ ಗುಡ್ ಬೈ ಹೇಳಿದ್ದರು. ನಿನ್ನೆ ಮುಂಬೈನಲ್ಲಿ ನಡೆದ ಬಿಸಿಸಿಐ ನಮನ್ ಅವಾರ್ಡ್ ಕಾರ್ಯಕ್ರಮದಲ್ಲಿ ಅಶ್ವಿನ್ ಗೆ ಸನ್ಮಾನಿಸಲಾಯಿತು. ಈ ವೇಳೆ ಅವರಿಗೆ ನಿವೃತ್ತಿ ನಂತರದ ಜೀವನದ ಬಗ್ಗೆ ಪ್ರಶ್ನಿಸಲಾಯಿತು.

ಮೊದಲು ತಮಾಷೆಯಾಗಿ ‘ಅವರು ನನ್ನನ್ನು ಹೊರಹಾಕಿದರು’ ಎಂದ ಅಶ್ವಿನ್ ಬಳಿಕ ತಮ್ಮ ನಿವೃತ್ತ ಜೀವನದ ಬಗ್ಗೆ ಮಾತನಾಡಿದ್ದಾರೆ. ‘ಇಷ್ಟು ವರ್ಷ ನಾನು ಮನೆಯ ಕಡೆಗೆ ಗಮನಹರಿಸಿರಲಿಲ್ಲ. ಆದರೆ ಈಗ ನಿವೃತ್ತಿ ಬಳಿಕ ನನ್ನ ಮಕ್ಕಳನ್ನು ಶಾಲೆಗೆ ಡ್ರಾಪ್ ಮಾಡುವುದು ಅವರ ಜೊತೆಗಿರುವುದು ಒಂಥರಾ ಖುಷಿ ಕೊಡುತ್ತಿದೆ. ಮಕ್ಕಳನ್ನು ಕರೆದುಕೊಂಡು ಬರುವುದು, ಬಿಡುವುದು ಎಲ್ಲವನ್ನೂ ಮಾಡುತ್ತಿದ್ದೇನೆ’ ಎಂದಿದ್ದಾರೆ.

ನಮನ್ ಅವಾರ್ಡ್ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸೇರಿದಂತೆ ಬಹುತೇಕ ಆಟಗಾರರು, ಮಹಿಳಾ ಕ್ರಿಕೆಟ್ ತಂಡದ ಆಟಗಾರರೂ ಇದ್ದರು. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಗೆ ಜೀವಮಾನ ಶ್ರೇಷ್ಠ ಸಾಧನೆಗಾಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಣಜಿ ಪಂದ್ಯದಲ್ಲಿ ಭಾಗಿಯಾಗಿರುವ ಕಾರಣ ವಿರಾಟ್ ಕೊಹ್ಲಿ ಗೈರಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಪಂದ್ಯದ ನಡುವೆ ಕ್ರಿಕೆಟಿಗರು, ಪ್ರೇಕ್ಷಕರು ಕಿವಿಗೆ ಈ ಸಾಧನವನ್ನು ಏಕೆ ಹಾಕಿಕೊಳ್ಳುತ್ತಿದ್ದಾರೆ

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಮುಂದಿನ ಸುದ್ದಿ
Show comments