Webdunia - Bharat's app for daily news and videos

Install App

ಸ್ಟೀವ್ ಸ್ಮಿತ್ ಹೃದಯ ಚೂರು ಮಾಡಿದ ರವೀಂದ್ರ ಜಡೇಜಾರ ಆ ಎಸೆತ!

Webdunia
ಸೋಮವಾರ, 20 ಮಾರ್ಚ್ 2017 (11:53 IST)
ರಾಂಚಿ:  ಛೇ.. ಅದೇಕೆ ನಾನು ಹೀಗೆ ಮಾಡಿ ಬಿಟ್ಟೆ..? ಹೀಗಂತ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಅದೆಷ್ಟು ಬಾರಿ ಅಂದುಕೊಂಡರೋ. ತೃತೀಯ ಟೆಸ್ಟ್ ನ ಅಂತಿಮ ದಿನ ಸ್ಮಿತ್ ಔಟಾದಾಗ ನೋಡುಗರಿಗೂ ಹೀಗೇ ಅನಿಸಿತ್ತು.

 

ಕೊಂಚ ವೈಡ್ ಎಸೆತ ನಿರೀಕ್ಷಿಸುತ್ತಿದ್ದ ಸ್ಮಿತ್, ಜಡೇಜಾ ಎಸೆದ ಆ ನೇರ ಎಸೆತವನ್ನು ಜಡ್ಜ್ ಮಾಡುವುದರಲ್ಲಿ ಎಡವಿದರು. ಬ್ಯಾಟ್ ಮೇಲೆತ್ತಿ ಹಿಡಿದು ಬಾಲ್ ವಿಕೆಟ್ ಕೀಪರ್ ಕೈಗೆ ಹೋಗಲು ಅನುವು ಮಾಡಿಕೊಡುವವರಂತೆ ನಿಂತಿದ್ದರು. ಆದರೆ ದುರಾದೃಷ್ಟವಶಾತ್ ಅದು ವಿಕೆಟ್ ಎಗರಿಸಿತ್ತು. ತಾವಾಗಿಯೇ ವಿಕೆಟ್ ಕೈ ಚೆಲ್ಲುವಂತಾಯಿತು ಸ್ಮಿತ್. ಭಾರತೀಯರ ಖುಷಿಗೆ ಪಾರವೇ ಇರಲಿಲ್ಲ.

 
ದ್ವಿತೀಯ ಇನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ಭೋಜನ ವಿರಾಮದ ವೇಳೆಗೆ 4 ವಿಕೆಟ್ ನಷ್ಟಕ್ಕೆ 83 ರನ್ ಗಳಿಸಿತ್ತು. ಭಾರತದ ಮೊದಲ ಇನಿಂಗ್ಸ್ ಮೊತ್ತ ದಾಟಲು ಇನ್ನೂ ರನ್ ಗಳಿಸಬೇಕಿದೆ. ಆದರೆ ರನ್ ಗಳಿಸುವುದರ ಜತೆಗೆ ವಿಕೆಟ್ ಉಳಿಸಿಕೊಳ್ಳುವ ಸಂಕಷ್ಟದಲ್ಲಿ ಪ್ರವಾಸಿಗರಿದ್ದಾರೆ.

 
ನಿನ್ನೆಯಷ್ಟೇ ಆಸ್ಟ್ರೇಲಿಯಾ ಕೋಚ್ ಡ್ಯಾರೆನ್ ಲೆಹಮನ್ ರವೀಂದ್ರ ಜಡೇಜಾ ನಿರ್ಣಾಯಕ ಬೌಲರ್ ಎಂದಿದ್ದರು.  ಅದು ನಿಜವೇ. ಇಂದು ಜಡೇಜಾ ಆಸ್ಟ್ರೇಲಿಯಾದ ಪ್ರಮುಖ ವಿಕೆಟ್ ಸ್ಮಿತ್ ರನ್ನು ಬಲೆಗೆ ಕೆಡವಿ ಆ ಮಾತನ್ನು ಸಮರ್ಥಿಸಿದರು.  ಭಾರತ ಪಂದ್ಯ ಗೆಲ್ಲಬೇಕಾದರೆ ಆದಷ್ಟು ಬೇಗ ಆಸ್ಟ್ರೇಲಿಯಾವನ್ನು ಆಲೌಟ್ ಮಾಡಲೇಬೇಕು. ಊಟ ಮುಗಿದ ಮೇಲೆ ಭಾರತ ಹೇಗೆ ಆಡುತ್ತದೆ ಎಂದು ಕಾದು ನೋಡಬೇಕು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments