Select Your Language

Notifications

webdunia
webdunia
webdunia
webdunia

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB

Krishnaveni K

ಬೆಂಗಳೂರು , ಬುಧವಾರ, 4 ಜೂನ್ 2025 (17:56 IST)
ಬೆಂಗಳೂರು: ಐಪಿಎಲ್ 2025 ರಲ್ಲಿ ಚಾಂಪಿಯನ್ ಆಗಿ ತವರಿಗೆ ಬಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ್ದು 50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜನರನ್ನು ನಿಯಂತ್ರಿಸಲಾಗದೇ ಚಿನ್ನಸ್ವಾಮಿ ಕಡೆಗೆ ತೆರಳುವ ಮೆಟ್ರೋ ಸ್ಥಗಿತಗೊಳಿಸಲಾಗಿದೆ.

ಐಪಿಎಲ್ ಗೆದ್ದ ಆರ್ ಸಿಬಿ ತಂಡ ಮೊದಲು ವಿಧಾನಸೌಧಕ್ಕೆ ಬಂದು ನಂತರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದೆ. ಈ ವೇಳೆ ಎರಡೂ ಕಡೆ ಸಾಕಷ್ಟು ಸಂಖ್ಯೆಯಲ್ಲಿ ಜನ ಜಮಾಯಿಸಿದ್ದಾರೆ. ಈ ವೇಳೆ ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಜನರು ನೂಕು ನುಗ್ಗಲು ನಡೆಸಿದ್ದಾರೆ.

ಹೀಗಾಗಿ ಕಾಲ್ತುಳಿತಕ್ಕೆ ಸುಮಾರು 11 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 6 ಮಂದಿ ಗಂಭೀರ ಗಾಯಗೊಂಡು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 50 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಸದ್ಯಕ್ಕೆ ಗಾಯಾಳುಗಳನ್ನು ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ್ದು ಗಾಯಾಳುಗಳ ಸ್ಥಿತಿಗತಿ ವಿಚಾರಿಸುತ್ತಿದ್ದಾರೆ. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ದುರ್ಘಟನೆ ಸಂಭವಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ