Webdunia - Bharat's app for daily news and videos

Install App

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

Krishnaveni K
ಬುಧವಾರ, 4 ಜೂನ್ 2025 (17:56 IST)
ಬೆಂಗಳೂರು: ಐಪಿಎಲ್ 2025 ರಲ್ಲಿ ಚಾಂಪಿಯನ್ ಆಗಿ ತವರಿಗೆ ಬಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ್ದು 50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜನರನ್ನು ನಿಯಂತ್ರಿಸಲಾಗದೇ ಚಿನ್ನಸ್ವಾಮಿ ಕಡೆಗೆ ತೆರಳುವ ಮೆಟ್ರೋ ಸ್ಥಗಿತಗೊಳಿಸಲಾಗಿದೆ.

ಐಪಿಎಲ್ ಗೆದ್ದ ಆರ್ ಸಿಬಿ ತಂಡ ಮೊದಲು ವಿಧಾನಸೌಧಕ್ಕೆ ಬಂದು ನಂತರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದೆ. ಈ ವೇಳೆ ಎರಡೂ ಕಡೆ ಸಾಕಷ್ಟು ಸಂಖ್ಯೆಯಲ್ಲಿ ಜನ ಜಮಾಯಿಸಿದ್ದಾರೆ. ಈ ವೇಳೆ ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಜನರು ನೂಕು ನುಗ್ಗಲು ನಡೆಸಿದ್ದಾರೆ.

ಹೀಗಾಗಿ ಕಾಲ್ತುಳಿತಕ್ಕೆ ಸುಮಾರು 11 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 6 ಮಂದಿ ಗಂಭೀರ ಗಾಯಗೊಂಡು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 50 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಸದ್ಯಕ್ಕೆ ಗಾಯಾಳುಗಳನ್ನು ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ್ದು ಗಾಯಾಳುಗಳ ಸ್ಥಿತಿಗತಿ ವಿಚಾರಿಸುತ್ತಿದ್ದಾರೆ. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ದುರ್ಘಟನೆ ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments