Webdunia - Bharat's app for daily news and videos

Install App

ಆರ್ ಸಿಬಿ ಫ್ಯಾನ್ಸ್ ಗೆ ಬೆಲೆಯೇ ಇಲ್ಲ, ಲಕ್ನೋ ಮಾಲಿಕರ ಬಳಿಕ ಕೆಎಲ್ ರಾಹುಲ್ ಹೇಳಿದ್ದೇನು

Krishnaveni K
ಬುಧವಾರ, 28 ಆಗಸ್ಟ್ 2024 (09:43 IST)
ಮುಂಬೈ: ಈ ಬಾರಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಬಿಟ್ಟು ಕೆಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿಕೊಳ್ಳಲಿದ್ದಾರೆ ಎಂಬ ಮಾತು ದಟ್ಟವಾಗಿತ್ತು. ಆದರೆ ಮೊನ್ನೆಯಷ್ಟೇ ಲಕ್ನೋ ಮಾಲಿಕರನ್ನು ರಾಹುಲ್ ಭೇಟಿಯಾದ ಬಳಿಕ ಅದೆಲ್ಲಾ ಸುಳ್ಳು ಎನಿಸುತ್ತಿದೆ.

ಲಕ್ನೋ ಮಾಲಿಕ ಸಂಜೀವ್ ಗೊಯೆಂಕಾ ಕಳೆದ ಸೀಸನ್ ನಲ್ಲಿ ಮೈದಾನದಲ್ಲಿಯೇ ರಾಹುಲ್ ಗೆ ಬೈದಿದ್ದು ಭಾರೀ ಸುದ್ದಿಯಾಗಿತ್ತು. ಹೀಗಾಗಿ ಈ ಬಾರಿ ರಾಹುಲ್ ಲಕ್ನೋ ತಂಡ ಬಿಡಬಹುದು ಎಂದೇ ಎಲ್ಲರೂ ಲೆಕ್ಕಾಚಾರ ಹಾಕಿದ್ದರು. ಇದರಿಂದಾಗಿ ಅವರು ಆರ್ ಸಿಬಿ ಸೇರಿಕೊಳ್ಳುವ ವದಂತಿಗಳು ದಟ್ಟವಾಗಿತ್ತು.

ಆದರೆ ಮೊನ್ನೆ ಲಕ್ನೋ ಮಾಲಿಕ ಸಂಜೀವ್ ಗೊಯೆಂಕಾರನ್ನು ಭೇಟಿ ಮಾಡಿದ್ದ ಕೆಎಲ್ ರಾಹುಲ್ ಈ ತಂಡದಲ್ಲಿಯೇ ಉಳಿದುಕೊಳ್ಳಲು ಬಯಸಿರುವುದಾಗಿ ತಿಳಿಸಿದ್ದಾರಂತೆ. ನಾನು ರಿಲೀಸ್ ಆಗಲು ಇಷ್ಟಪಡಲ್ಲ ಎಂದು ಸ್ಪಷ್ಟ ಸಂದೇಶ ನೀಡಿದ್ದಾರಂತೆ. ಹೀಗಾಗಿ ರಾಹುಲ್ ಈ ಬಾರಿಯೂ ಲಕ್ನೋದಲ್ಲಿಯೇ ಉಳಿದುಕೊಳ್ಳುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ.

ಇನ್ನು ಅವರನ್ನು ತಂಡಕ್ಕೆ ಬನ್ನಿ ಎಂದು ಕರೆಯುತ್ತಿದ್ದ ಆರ್ ಸಿಬಿ ಫ್ಯಾನ್ಸ್ ಕರೆಗೆ ಕ್ಯಾರೇ ಎನ್ನದೇ ರಾಹುಲ್ ಲಕ್ನೋದಲ್ಲಿ ಉಳಿದುಕೊಳ್ಳುವ ನಿರ್ಧಾರ ಮಾಡಿದ್ದಾರೆ. ಕರ್ನಾಟಕ ಮೂಲದ ರಾಹುಲ್ ಇನ್ನೂ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಹೀಗಾಗಿ ಅಭಿಮಾನಿಗಳಲ್ಲಿ ಈಗಲೂ ಆಶಾಭಾವನೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments