Webdunia - Bharat's app for daily news and videos

Install App

ಐಪಿಎಲ್ 2024: ಆರ್ ಸಿಬಿ ಗೆಲ್ಲಲೆಂದು ಅಭಿಮಾನಿಗಳ ಟೆಂಪಲ್ ರನ್

Krishnaveni K
ಬುಧವಾರ, 22 ಮೇ 2024 (11:58 IST)
ಬೆಂಗಳೂರು: ಅಹಮ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಆರ್ ಸಿಬಿ ವರ್ಸಸ್ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ ಗೆಲ್ಲಲೆಂದು ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ.

ಇಂದು ಎಲಿಮಿನೇಟರ್ ಪಂದ್ಯದಲ್ಲಿ ಆರ್ ಸಿಬಿ ಗೆದ್ದ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ. ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಒಂದು ವೇಳೆ ಇಂದು ಸೋತರೆ ಅಲ್ಲಿಗೆ ಈ ಬಾರಿಯೂ ಕಪ್ ಗೆಲ್ಲುವ ಕನಸು ಭಗ್ನವಾಗಲಿದೆ.

ಆದರೆ ಈ ಬಾರಿ ಟೂರ್ನಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ ಆರ್ ಸಿಬಿ ಫೀನಿಕ್ಸ್ ನಂತೆ ಎದ್ದು ಸತತವಾಗಿ 6 ಗೆಲುವು ಕಂಡು ಪ್ಲೇ ಆಫ್ ಗೆ ಅರ್ಹತೆ ಪಡೆದಿದ್ದೇ ಒಂದು ಸಾಹಸ. ಆರ್ ಸಿಬಿಯ ಆಟ ಕಂಡು ಅಭಿಮಾನಿಗಳಲ್ಲೂ ಕಪ್ ಗೆಲ್ಲುವ ಭರವಸೆ ಮೂಡಿದೆ.

ಹೀಗಾಗಿ ಅಭಿಮಾನಿಗಳು ದೇವಾಲಯಗಳಿಗೆ ತೆರಳಿ ಇಂದು ಆರ್ ಸಿಬಿ ಗೆಲ್ಲುವಂತೆ ಪ್ರಾರ್ಥನೆ ನಡೆಸುತ್ತಿದ್ದಾರೆ. ಕಳೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲೂ ಆರ್ ಸಿಬಿಗೆ ಮಾಡು ಇಲ್ಲವೇ ಮಡಿ ಪರಿಸ್ಥಿತಿಯಿತ್ತು. ಈ ಪಂದ್ಯಕ್ಕೆ ಮುನ್ನವೂ ಅಭಿಮಾನಿಗಳು ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಇಂದು ಮತ್ತೊಮ್ಮೆ ಆರ್ ಸಿಬಿ ಗೆಲ್ಲಿಸಿಕೊಡುವಂತೆ ದೇವರ ಮೊರೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments