Webdunia - Bharat's app for daily news and videos

Install App

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

Krishnaveni K
ಬುಧವಾರ, 4 ಜೂನ್ 2025 (16:01 IST)
ಬೆಂಗಳೂರು: ಐಪಿಎಲ್ ಗೆದ್ದು ತವರಿಗೆ ಬಂದಿಳಿದಿರುವ ಆರ್ ಸಿಬಿ ಆಟಗಾರರಿಗೆ ಬೆಂಗಳೂರು ಎಚ್ಎಎಲ್ ಏರ್ ಪೋರ್ಟ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭವ್ಯ ಸ್ವಾಗತ ಕೋರಿದ್ದಾರೆ. ಈ ವೇಳೆ ಕೊಹ್ಲಿ ಕೈಗೆ ಕನ್ನಡ ಬಾವುಟ ನೀಡಿದ್ದು ಇದನ್ನು ನೋಡುವುದೇ ಚಂದ ಎನ್ನುತ್ತಿದ್ದಾರೆ ಫ್ಯಾನ್ಸ್.

ಐಪಿಎಲ್ 2025 ರ ಫೈನಲ್ ಗೆದ್ದು ತವರಿಗೆ ಬಂದಿಳಿದಿರುವ ಕ್ರಿಕೆಟಿಗರಿಗೆ ಇಂದು ವಿಧಾನಸೌಧದ ಮುಂಭಾಗ ಸನ್ಮಾನ ಕಾರ್ಯಕ್ರಮ ಮತ್ತು ಬಳಿಕ ಚಿನ್ನಸ್ವಾಮಿಯಲ್ಲಿ ಅಭಿನಂದನಾ ಕಾರ್ಯಕ್ರಮವಿದೆ. ಇದಕ್ಕಾಗಿ ಕ್ರಿಕೆಟಿಗರು, ಸಹಾಯಕ ಸಿಬ್ಬಂದಿಯಾಗಿ ಬೆಂಗಳೂರಿಗೆ ಬಂದಿಳಿದಿದ್ದಾರೆ.

ನಿನ್ನೆಯೇ ವಿರಾಟ್ ಕೊಹ್ಲಿ ಬೆಂಗಳೂರಿನ ಅಭಿಮಾನಿಗಳನ್ನು ನೋಡಲು ಕಾತುರರಾಗಿರುವುದಾಗಿ ಹೇಳಿದ್ದರು. ಅವರಿಗೆ ಅಭಿಮಾನಿಗಳು ನಿರಾಸೆ ಮಾಡಿಲ್ಲ. ಸಾಗರೋಪಾದಿಯಲ್ಲಿ ಜನ ವಿಧಾನಸೌಧ ಮತ್ತು ಚಿನ್ನಸ್ವಾಮಿ ಮೈದಾನಕ್ಕೆ ಲಗ್ಗೆಯಿಡುತ್ತಿದ್ದಾರೆ.

ಇನ್ನು, ವಿರಾಟ್ ಕೊಹ್ಲಿ ಕೈಗೆ ಡಿಸಿಎಂ ಡಿಕೆ ಶಿವಕುಮಾರ್ ಆರ್ ಸಿಬಿ ಬಾವುಟದ ಜೊತೆಗೆ ಕನ್ನಡ ಬಾವುಟವನ್ನೂ ನೀಡಿದ್ದಾರೆ. ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡಿ ಕನ್ನಡಿಗ ಫ್ಯಾನ್ಸ್ ಭಾವುಕರಾಗಿದ್ದು, ಅವರ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಖಷಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

IND vs ENG: ಟೀಂ ಇಂಡಿಯಾಗೆ ಬಿಗ್ ಶಾಕ್, ರಿಷಭ್ ಪಂತ್ ಸರಣಿಯಿಂದಲೇ ಔಟ್

ಮುಂದಿನ ಸುದ್ದಿ
Show comments