RCB vs CSK: ಉಪಯೋಗವೇ ಇಲ್ಲದಿದ್ದಾಗ ಉದ್ದುದ್ದ ಸಿಕ್ಸರ್ ಸಿಡಿಸಿ ಏನು ಯೂಸ್: ಟ್ರೋಲ್ ಆದ ಧೋನಿ

Krishnaveni K
ಶನಿವಾರ, 29 ಮಾರ್ಚ್ 2025 (09:54 IST)
Photo Credit: X
ಚೆನ್ನೈ: ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ಧೋನಿ ಅಗತ್ಯವಿದ್ದಾಗಲೂ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬಂದಿದ್ದಕ್ಕೆ ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ಆರ್ ಸಿಬಿ ಮೊದಲು ಬ್ಯಾಟಿಂಗ್ ಮಾಡಿ 197 ರನ್ ಗಳ ಗೆಲುವಿನ ಗುರಿ ನೀಡಿತ್ತು. ಈ ಮೊತ್ತ ಬೆನ್ನತ್ತಲು ಸಿಎಸ್ ಕೆ ಸ್ಪೋಟಕ ಬ್ಯಾಟಿಂಗ್ ಅಗತ್ಯವಿತ್ತು. ಆದರೆ ಸಿಎಸ್ ಕೆ ಅಗ್ರಕ್ರಮಾಂಕ ಕೈಕೊಟ್ಟಿತು. ಅದರಲ್ಲೂ ಋತುರಾಜ್ ಗಾಯಕ್ ವಾಡ್ ಶೂನ್ಯಕ್ಕೇ ಔಟಾದರು.

ತಂಡದ ಪರಿಸ್ಥಿತಿ ಏನೇ ಇದ್ದರೂ ಧೋನಿ ಮಾತ್ರ ಎಂದಿನಂತೆ ಕಳೆ ಕ್ರಮಾಂಕದಲ್ಲೇ ಬ್ಯಾಟಿಂಗ್ ಗೆ ಬಂದಿದ್ದು ಎಲ್ಲರ ಟೀಕೆಗೆ ಗುರಿಯಾಯಿತು. ನಿನ್ನೆಯ ಪಂದ್ಯದಲ್ಲಿ ಧೋನಿ ಕೊನೆಯ ಒಂದೆರಡು ಓವರ್ ಬಾಕಿಯಿರುವಾಗ ಬ್ಯಾಟಿಂಗ್ ಗೆ ಬಂದು 2 ಸಿಕ್ಸರ್, 3 ಬೌಂಡರಿ ಸಹಿತ 16 ಓವರ್ ನಲ್ಲಿ ಅಜೇಯ 30 ರನ್ ಸಿಡಿಸಿದರು.

ತಂಡ ಆಗಲೇ ಸೋಲಿನ ಸುಳಿಯಲ್ಲಿತ್ತು. ಈ ಸಂದರ್ಭದಲ್ಲಿ ಏನೂ ಮಾಡುವ ಪರಿಸ್ಥಿತಿಯಲ್ಲಿರಲಿಲ್ಲ. ಆಗ ಬ್ಯಾಟಿಂಗ್ ಗೆ ಬಂದು ಸಿಕ್ಸ್, ಬೌಂಡರಿ ಗಳಿಸಿ ಏನು ಪ್ರಯೋಜನ? ಇದರ ಬದಲು ಸ್ವಲ್ಪ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬಂದು ಇದೇ ಇನಿಂಗ್ಸ್ ಆಡಿದ್ದರೆ ತಂಡಕ್ಕೆ ಗೆಲುವಿನ ಭರವಸೆಯಾದರೂ ಬರುತ್ತಿತ್ತು ಎಂದು ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

ಮುಂದಿನ ಸುದ್ದಿ
Show comments