Webdunia - Bharat's app for daily news and videos

Install App

ಕೊಬ್ಬಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೋದಿ ಬಗ್ಗೆ ಏನು ಹೇಳಿದ್ದಾನೆ ಗೊತ್ತಾ?

Webdunia
ಮಂಗಳವಾರ, 4 ಅಕ್ಟೋಬರ್ 2016 (15:43 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಮೊಟ್ಟೆಯಂತೆ, ಅದಕ್ಕೆ ತಂದೆಯಿಲ್ಲ, ತಾಯಿಯೂ ಇಲ್ಲ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಜಾವೇದ್ ಮಿಯಂದಾದ್ ಸೊಕ್ಕಿನ ಹೇಳಿಕೆ ನೀಡಿದ್ದಾರೆ.
 
ಪಾಕಿಸ್ತಾನದ ಖಾಸಗಿ ಟಿವಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಿಯಂದಾದ್, ಭಾರತದಲ್ಲಿ ಕೆಲವರು ನಿಮ್ಮನ್ನು ಹತ್ಯೆ ಮಾಡಲು ಬಯಸುತ್ತಿದ್ದಾರೆ. ಇಂತಹ ವ್ಯಕ್ತಿಗಳ ವಿರುದ್ಧ ನೀವೆಲ್ಲರೂ ಒಗ್ಗಟ್ಟಾಗಬೇಕು ಎಂದು ಕರೆ ನೀಡಿದ್ದಾರೆ.  
 
ನಾನು ಪಾಕಿಸ್ತಾನದ ಕ್ರಿಕೆಟ್ ತಂಡದಲ್ಲಿದ್ದಾಗ ಭಾರತದ ಹಲವಾರು ನಗರಗಳ ಪ್ರವಾಸ ಮಾಡಿದ್ದೇನೆ. ಸಾಮಾನ್ಯ ಜನತೆಗೆ ಪಾಕ್ ವಿರುದ್ಧ ಯಾವುದೇ ಕೆಟ್ಟಭಾವನೆಗಳಿಲ್ಲ. ಆದರೆ, ತಂದೆ, ತಾಯಿಯಲ್ಲದ ಮೊಟ್ಟೆಯಂತಿರುವ ಪ್ರಧಾನಿ ನರೇಂದ್ರ ಮೋದಿಯಂತವರು ತುಂಬಾ ಜನರಿದ್ದಾರೆ ಎಂದರು. 
 
ಪ್ರಧಾನಿ ಮೋದಿ ಯಾರನ್ನು ಹೆದರಿಸುತ್ತಿದ್ದಾರೆ ಎನ್ನುವುದು ಅವರಿಗೆ ಗೊತ್ತಿಲ್ಲ. ನಾವು ಯುದ್ಧಕ್ಕೆ ಸಿದ್ದರಾಗಿದ್ದೇವೆ. ಸಾಯಲು ಸಿದ್ದ ಪಾಕಿಸ್ತಾನದ ಪ್ರತಿಯೊಬ್ಬ ವ್ಯಕ್ತಿ ಕೂಡಾ ಭಾರತದ ವಿರುದ್ಧದ ಪವಿತ್ರ ಯುದ್ಧದಲ್ಲಿ ಭಾಗಿಯಾಗಲು ಸಿದ್ದನಾಗಿದ್ದಾನೆ. ಭಾರತ ಹೇಡಿಗಳ ದೇಶ, ಭಾರತದಲ್ಲಿ ಸೇನೆ ಕೂಡಾ ಇಲ್ಲ ಎಂದು ಲೇವಡಿ ಮಾಡಿದ್ದಾರೆ.
 
ಭಾರತ ಮತ್ತು ಪಾಕಿಸ್ತಾನದೊಂದಿನ ಪಂದ್ಯವಾಗಲಿ ಅಥವಾ ಗಡಿತಂಟೆಯಾಗಲಿ ರೋಚಕವಾಗಿದ್ದು ಮಾಧ್ಯಮಗಳ ಗಮನ ಸೆಳೆಯುತ್ತಿರುತ್ತದೆ.
 
ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದ ಮೇಲೆ ಪಾಕಿಸ್ತಾನದ ಉಗ್ರರು ದಾಳಿ ನಡೆಸಿ 19 ಸೈನಿಕರ ಹತ್ಯೆಗೆ ಕಾರಣವಾದ ನಂತರ ಉಭಯ ದೇಶಗಳ ನಡುವೆ ಸಾಮರಸ್ಯ ಮತ್ತಷ್ಟು ಹದಗೆಟ್ಟಿದೆ.
 
ಉರಿ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮಿರದೊಳಗಿರುವ ಉಗ್ರರ ಶಿಬಿರಗಳಿಗೆ ನುಗ್ಗಿ ಸೀಮಿತ ದಾಳಿ ನಡೆಸಿ 45 ಉಗ್ರರ ಮಾರಣಹೋಮ ನಡೆಸಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

Jay Shah: ಅಪ್ಪ ನಂಗೂ ಒಂದು ಮಿಸೈಲ್ ಕೊಡು ಎಂದು ರಾವಲ್ಪಿಂಡಿಗೆ ಹೊಡೆದ ಜಯ್ ಶಾ

ಮುಂದಿನ ಸುದ್ದಿ
Show comments