Webdunia - Bharat's app for daily news and videos

Install App

ನ್ಯೂಜಿಲೆಂಡ್ ವಿರುದ್ಧದ ಸರಣಿ ಸೋಲಿಗೆ ಟೀಂ ಇಂಡಿಯಾದ ಇವರಿಬ್ಬರೇ ಪ್ರಮುಖ ಕಾರಣ!

Webdunia
ಬುಧವಾರ, 12 ಫೆಬ್ರವರಿ 2020 (07:38 IST)
ಬೇ ಓವಲ್: ನ್ಯೂಜಿಲೆಂಡ್ ವಿರುದ್ಧ ಮೂರೂ ಏಕದಿನ ಪಂದ್ಯಗಳನ್ನು ಸೋತ ಟೀಂ ಇಂಡಿಯಾ ಹೀನಾಯ ಪ್ರದರ್ಶನದೊಂದಿಗೆ ಸರಣಿ ಮುಕ್ತಾಯಗೊಳಿಸಿದೆ. ವೈಟ್ ವಾಶ್ ಅವಮಾನ ಅನುಭವಿಸಲು ಪ್ರಮುಖವಾಗಿ ಕಾರಣವಾಗಿದ್ದು
ಈ ಇಬ್ಬರು ಕ್ರಿಕೆಟಿಗರು ಎಂದರೂ ತಪ್ಪಾಗಲಾರದು.



ಗಾಯದ ಬಳಿಕ ತಂಡಕ್ಕೆ ಮರಳಿದ ಜಸ್ಪ್ರೀತ್ ಬುಮ್ರಾ ಮೇಲೆ ಟೀಂ ಇಂಡಿಯಾಗೆ ಅತಿಯಾದ ನಿರೀಕ್ಷೆಯಿತ್ತು. ಆದರೆ ಬುಮ್ರಾ ಮೂರೂ ಪಂದ್ಯಗಳಲ್ಲೂ ಫ್ಲಾಪ್ ಶೋ ನೀಡಿದ್ದು ಭಾರತಕ್ಕೆ ಮುಳುವಾಯಿತು. ತಂಡಕ್ಕೆ ಬೇಕಾಗಿದ್ದ ಆರಂಭಿಕ ವಿಕೆಟ್ ಕೀಳಲು ಅಥವಾ ರನ್ ಗತಿ ನಿಯಂತ್ರಿಸಲು ಬುಮ್ರಾ ವಿಫಲರಾದರು. ಪರಿಣಾಮ ನ್ಯೂಜಿಲೆಂಡ್ ಪ್ರತೀ ಪಂದ್ಯದಲ್ಲೂ ಉತ್ತಮ ಆರಂಭ ಪಡೆಯಿತು. ಅದಕ್ಕೆ ಅನುಗುಣವಾಗಿ ಉಳಿದ ಬ್ಯಾಟ್ಸ್ ಮನ್ ಗಳು ಉತ್ತಮ ಸ್ಕೋರ್ ಮಾಡಿದರು.

ಇನ್ನು ಸರಣಿಯ ಆರಂಭಕ್ಕೂ ಮೊದಲೇ ಟೀಂ ಇಂಡಿಯಾ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ರ ಸೇವೆಯಿಂದ ವಂಚಿತವಾಗಿತ್ತು. ಇವರಿಬ್ಬರ ಅನುಪಸ್ಥಿತಿಯಲ್ಲಿ ತಂಡಕ್ಕೆ ಭದ್ರ ಬುನಾದಿ ಹಾಕುವ ಹೊಣೆಗಾರಿಕೆ ವಿರಾಟ್ ಕೊಹ್ಲಿ ಮೇಲಿತ್ತು. ಆದರೆ ಕೊಹ್ಲಿ ಕಳೆದ ಮೂರೂ ಪಂದ್ಯಗಳಲ್ಲಿ ಜುಜುಬಿ ಮೊತ್ತಕ್ಕೆ ಔಟಾಗುವ ಮೂಲಕ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದರು. ಇದರಿಂದಾಗಿ ಕೆಳ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಮೇಲೆ ಹೆಚ್ಚಿನ ಒತ್ತಡ  ಬಿತ್ತು. ದೊಡ್ಡ ಮೊತ್ತ ಗಳಿಸಲು ಸಾಧ‍್ಯವಾಗದೇ ಟೀಂ ಇಂಡಿಯಾ ಸರಣಿ ಸೋಲು ಅನುಭವಿಸಿತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments