ಮೊಹಮ್ಮದ್ ಸಿರಾಜ್ ಗೆ ಮೈದಾನದಲ್ಲೇ ಕ್ಷಮೆ ಕೇಳಿದ ರಿಷಬ್ ಪಂತ್: ಅಂತಹದ್ದೇನಾಯ್ತು

Krishnaveni K
ಶುಕ್ರವಾರ, 20 ಸೆಪ್ಟಂಬರ್ 2024 (11:58 IST)
ಚೆನ್ನೈ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನವಾದ
ಇಂದು ಭಾರತೀಯ ಬೌಲರ್ ಮೊಹಮ್ಮದ್ ಸಿರಾಜ್ ಗೆ ಅನ್ಯಾಯವಾಗಿದ್ದಕ್ಕೆ ವಿಕೆಟ್ ಕೀಪರ್ ರಿಷಬ್ ಪಂತ್ ಮೈದಾನದಲ್ಲೇ ಕ್ಷಮೆ ಕೇಳಿದರು. ಅಷ್ಟಕ್ಕೂ ಅಂತಹದ್ದೇನಾಯ್ತು ಇಲ್ಲಿದೆ ನೋಡಿ ವಿವರ.

ಎರಡನೇ ದಿನವಾದ ಇಂದು ಭಾರತ ಮೊದಲ ಇನಿಂಗ್ಸ್ ನಲ್ಲಿ 376 ರನ್ ಗಳಿಗೆ ಆಲೌಟ್ ಆಯಿತು. ನಿನ್ನೆ 86 ರನ್ ಗಳಿಸಿ ಶತಕದ ನಿರೀಕ್ಷೆಯಲ್ಲಿದ್ದ ರವೀಂದ್ರ ಜಡೇಜಾ ಇಂದು ಒಂದೂ ರನ್ ಗಳಿಸದೇ ಔಟಾದರು. ಇದರಿಂದ ಶತಕ ತಪ್ಪಿಸಿಕೊಂಡು ನಿರಾಸೆ ಅನುಭವಿಸಿದರು. ಆದರೆ ಅಶ್ವಿನ್ ಅಂತಿಮವಾಗಿ 113 ರನ್ ಗಳಿಸಿ ಔಟಾದರು.

ಇದೀಗ ಬಾಂಗ್ಲಾ ಮೊದಲ ಇನಿಂಗ್ಸ್ ಆರಂಭಿಸಿದ್ದು ಭೋಜನ ವಿರಾಮದ ವೇಳೆಗೆ 3 ವಿಕೆಟ್ ಕಳೆದುಕೊಂಡು 26 ರನ್ ಗಳಿಸಿ ಸಂಕಷ್ಟದಲ್ಲಿದೆ. ಭಾರತದ ಪರ ಜಸ್ಪ್ರೀತ್ ಬುಮ್ರಾ ಮೊದಲ ಓವರ್ ನಲ್ಲೇ ಶದ್ಮಾನ್ ಇಸ್ಲಾಮ್ ರನ್ನು 2 ರನ್ ಗೆ ಕ್ಲೀನ್ ಬೌಲ್ಡ್ ಮಾಡಿದರು. ಅದಾದ ಬಳಿಕ ಆಕಾಶ್ ದೀಪ್ ಸಿಂಗ್ 2 ವಿಕೆಟ್ ಕಬಳಿಸಿದರು.

ಆದರೆ ಈ ನಡುವೆ ಮೊಹಮ್ಮದ್ ಸಿರಾಜ್ ಗೆ ವಿಕೆಟ್ ಸಿಗಬೇಕಿತ್ತು. ಅವರು ಎಸೆದ ಎಸೆತವೊಂದು ಎಲ್ ಬಿಡಬ್ಲ್ಯು ಆಗುವುದರಲ್ಲಿತ್ತು. ಆದರೆ ಅಂಪಾಯರ್ ನಾಟೌಟ್ ನೀಡಿದರು. ವಿಕೆಟ್ ಕೀಪರ್ ರಿಷಬ್ ಪಂತ್ ಸಲಹೆ ಕೇಳಿದ ನಾಯಕ ರೋಹಿತ್ ಶರ್ಮಾ ಬಾಲ್ ಹೈಟ್ ಲ್ಲಿತ್ತು ಎಂದು ಡಿಆರ್ ಎಸ್ ಗೂ ಮನವಿ ಸಲ್ಲಿಸಲಿಲ್ಲ. ಆದರೆ ಟಿವಿ ರಿಪ್ಲೇ ನೋಡಿದಾಗ ಎಲ್ ಬಿ ಆಗಿದ್ದು ಸ್ಪಷ್ಟವಾಗಿತ್ತು.

ಹೀಗಾಗಿ ಮೊಹಮ್ಮದ್ ಸಿರಾಜ್ ಹತಾಶರಾದರೆ, ಇತ್ತ ರಿಷಬ್ ಪಂತ್ ಸರಿಯಾಗಿ ಸಲಹೆ ನೀಡದೇ ಇದ್ದಿದ್ದಕ್ಕೆ ಮೈದಾನದಲ್ಲೇ ಕೈ ಎತ್ತಿ ಸಿರಾಜ್ ಗೆ ಕ್ಷಮೆ ಕೇಳಿದರು. ಅತ್ತ ರೋಹಿತ್ ಕೂಡಾ ಹತಾಶೆಗೊಂಡು ಒಂದು ಸ್ಮೈಲ್ ಕೊಟ್ಟರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

IPL 2026: ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿಗೆ ಮಾಜಿ ಮಾಲೀಕ ವಿಜಯ್‌ ಮಲ್ಯರಿಂದ ವಿಶ್‌

ಮುಂದಿನ ಸುದ್ದಿ
Show comments