Webdunia - Bharat's app for daily news and videos

Install App

ದುಲೀಪ್ ಟ್ರೋಫಿಯಲ್ಲಿ ರಿಷಬ್ ಪಂತ್ ಬ್ಯಾಟಿಂಗ್ ಕೆಎಲ್ ರಾಹುಲ್ ಗೆ ಶುರುವಾಯ್ತು ಆತಂಕ

Krishnaveni K
ಶನಿವಾರ, 7 ಸೆಪ್ಟಂಬರ್ 2024 (16:44 IST)
ಬೆಂಗಳೂರು: ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭಾರತ ಎ ತಂಡದ ವಿರುದ್ಧದ ಪಂದ್ಯದಲ್ಲಿ ಬಿ ತಂಡದ ಪರ ಆಡುತ್ತಿರುವ ರಿಷಬ್ ಪಂತ್ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ. ಇದು ಕೆಎಲ್ ರಾಹುಲ್ ಅಭಿಮಾನಿಗಳಲ್ಲಿ ಆತಂಕ ತಂದಿದೆ.

ಈ ದುಲೀಪ್ ಟ್ರೋಫಿ ಪಂದ್ಯದ ಪ್ರದರ್ಶನವನ್ನಾಧರಿಸಿ ಮುಂಬರುವ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಲಾಗುತ್ತದೆ. ಇಂದು ಕೆಎಲ್ ರಾಹುಲ್ ತಮ್ಮ ತವರು ಮೈದಾನದಲ್ಲೇ ಕೆಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. 37 ರನ್ ಗಳಿಸಲು ಬರೋಬ್ಬರಿ 111 ಎಸೆತ ಎದುರಿಸಿದ್ದರು.

ಆದರೆ ರಿಷಬ್ ಪಂತ್ ತಮ್ಮ ಬೀಡು ಬೀಸಾದ ಶೈಲಿಯ ಬ್ಯಾಟಿಂಗ್ ಮೂಲಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ರಿಷಬ್ ಕೆಳ ಕ್ರಮಾಂಕದಲ್ಲಿ ಇಂತಹ ಬ್ಯಾಟಿಂಗ್ ಗೇ ಹೆಸರುವಾಸಿ. ಅಪಘಾತದ ಬಳಿಕ ಒಂದು ವರ್ಷ ಕ್ರಿಕೆಟ್ ನಿಂದ ದೂರವಿದ್ದ ರಿಷಬ್ ಇತ್ತೀಚೆಗೆ ಟಿ20 ವಿಶ್ವಕಪ್ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕಮ್ ಬ್ಯಾಕ್ ಮಾಡಿದ್ದರು.

ಇಂದ ದುಲೀಪ್ ಟ್ರೋಫಿ ಪಂದ್ಯದಲ್ಲಿ ಒಟ್ಟು 47 ಎಸೆತ ಎದುರಿಸಿದ ಅವರು 61 ರನ್ ಚಚ್ಚಿ ಔಟಾದರು. ಅವರ ಈ ಇನಿಂಗ್ಸ್ ಆಯ್ಕೆಗಾರರನ್ನು ಇಂಪ್ರೆಸ್ ಮಾಡಲಿದೆ. ಆದರೆ ಅತ್ತ ಕೆಎಲ್ ರಾಹುಲ್ ರನ್ ಗಳಿಸಲು ತಿಣುಕಾಡಿರುವುದರಿಂದ ಅವರು ಮುಂಬರುವ ಟೆಸ್ಟ್ ಸರಣಿಗೆ ಆಯ್ಕೆಯಾಗುತ್ತಾರೋ ಇಲ್ಲವೋ ಎಂಬ ಆತಂಕ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments