Publish Date: Sat, 09 Jan 2021 (10:08 IST)
Updated Date: Sat, 09 Jan 2021 (10:10 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ಗಾಯಕ್ಕೊಳಗಾದ ರಿಷಬ್ ಪಂತ್ ಬದಲಿಗೆ ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ ಪರ ವೃದ್ಧಿಮಾನ್ ಸಹಾ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಿದ್ದಾರೆ.
ಬ್ಯಾಟಿಂಗ್ ವೇಳೆ ರಿಷಬ್ ಕೈಗೆ ಚೆಂಡು ಬಡಿದಿತ್ತು. ಹೀಗಾಗಿ ಅವರನ್ನು ಸ್ಕ್ಯಾನಿಂಗ್ ಗೆ ಕರೆದೊಯ್ಯಲಾಗಿದೆ ಎಂದು ಬಿಸಿಸಿಐ ಪ್ರಕಟಿಸಿದೆ. ಇದೀಗ ದ್ವಿತೀಯ ಇನಿಂಗ್ಸ್ ನಲ್ಲಿ ಬದಲಿ ಆಟಗಾರನಾಗಿ ವೃದ್ಧಿಮಾನ್ ಕಣಕ್ಕಿಳಿದಿದ್ದಾರೆ. ವಿಶೇಷವೆಂದರೆ ವೃದ್ಧಿಮಾನ್ ಆಡುವ ಬಳಗದಲ್ಲಿ ಸ್ಥಾನ ಪಡೆದಿರಲಿಲ್ಲ. ಆದರೆ ಈಗ ನಿಯಮದ ಪ್ರಕಾರ ಬದಲಿ ಆಟಗಾರನಾಗಿ ಕಣಕ್ಕಿಳಿದಿದ್ದಾರೆ.