ವಿಕೆಟ್ ಹಿಂದುಗಡೆ ರಿಷಬ್ ಪಂತ್ ನಡೆಸಿದ ಮಂಗನಾಟಕ್ಕೆ ಬೆಚ್ಚಿಬಿದ್ದ ಆಸೀಸ್!

Webdunia
ಶನಿವಾರ, 8 ಡಿಸೆಂಬರ್ 2018 (09:19 IST)
ಅಡಿಲೇಡ್: ಈ ಬಾರಿ ಭಾರತ ಮತ್ತು ಆಸ್ಟ್ರೇಲಿಯಾ ಸರಣಿಯಲ್ಲಿ ಸ್ಲೆಡ್ಜಿಂಗ್ ಮಾಡದೇ ಇರಲು ಆಸ್ಟ್ರೇಲಿಯಾ ತೀರ್ಮಾನಿಸಿದ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡಾ ನಾವೂ ಶಾಂತಿಯುತ ಕ್ರಿಕೆಟ್ ಆಡುತ್ತೇವೆ ಎಂದಿದ್ದರು.


ಆದರೆ ನಾಯಕನ ಮಾತನ್ನು ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಮೀರಿದ್ದಾರೆ. ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ದಿನ ರಿಷಬ್ ಪಂತ್ ವಿಕೆಟ್ ಕೀಪಿಂಗ್ ಮಾಡುತ್ತಲೇ ಜಿಗುಟು ಆಟ ಆಡುತ್ತಿದ್ದ ಆಸ್ಟ್ರೇಲಿಯಾ ಉಸ್ಮಾನ್ ಖವಾಜರನ್ನು ಕಿಚಾಯಿಸಿದ್ದು ಮೈಕ್ರೋಫೋನ್ ನಲ್ಲಿ ಸ್ಪಷ್ಟವಾಗಿ ಕೇಳಿದೆ.

ಮೊದಲ ಇನಿಂಗ್ಸ್ ನಲ್ಲಿ ಭಾರತದ ಪರ ಚೇತೇಶ್ವರ ಪೂಜಾರ ಇಡೀ ದಿನ ತಾಳ್ಮೆಯ ಆಟ ಆಡಿ ಶತಕ ಗಳಿಸಿದ್ದರು. ಅದೇ ರೀತಿ ಖವಾಜ ಕೂಡಾ ನಿಧಾನಗತಿಯ ಇನಿಂಗ್ಸ್ ಆಡಿ ಭಾರತಕ್ಕೆ ತಲೆನೋವಾಗಿ ಪರಿಣಮಿಸಿದ್ದರು. ಈ ವೇಳೆ ರಿಷಬ್ ಪಂತ್ ಖವಾಜರನ್ನು ಕಿಚಾಯಿಸಿದ್ದು, ‘ಎಲ್ಲರೂ ಪೂಜಾರ ಆಗಲು ಸಾಧ್ಯವಿಲ್ಲ ಇಲ್ಲಿ’ ಎಂದಿದ್ದಾರೆ. ಈ ರೀತಿ ಯಾವತ್ತೂ ಆಸ್ಟ್ರೇಲಿಯನ್ನರೇ ಸ್ಲೆಡ್ಜಿಂಗ್ ಗೆ ನಾಂದಿ ಹಾಡಿದರೆ ಈ ಬಾರಿ ಟೀಂ ಇಂಡಿಯಾದ ಯುವ ಆಟಗಾರನೇ ಆ ಕೆಲಸ ಮಾಡಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments