Select Your Language

Notifications

webdunia
webdunia
webdunia
webdunia

ಆಸ್ಟ್ರೇಲಿಯಾ ವಿರುದ್ಧ ಶತಕ ಗಳಿಸಿದ ರಿಷಬ್ ಪಂತ್ ಗೆ ಈ ವಿಚಾರದಲ್ಲಿ ತೆರೆಯಿತು ಅದೃಷ್ಟದ ಬಾಗಿಲು!

ಆಸ್ಟ್ರೇಲಿಯಾ ವಿರುದ್ಧ ಶತಕ ಗಳಿಸಿದ ರಿಷಬ್ ಪಂತ್ ಗೆ ಈ ವಿಚಾರದಲ್ಲಿ ತೆರೆಯಿತು ಅದೃಷ್ಟದ ಬಾಗಿಲು!
ಸಿಡ್ನಿ , ಭಾನುವಾರ, 6 ಜನವರಿ 2019 (08:52 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಅಮೋಘ ಪ್ರದರ್ಶನವಿತ್ತ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಗೆ ಇದೀಗ ಅದೃಷ್ಟ ಖುಲಾಯಿಸಿದೆ.


ರಿಷಬ್ ಇದುವರೆಗೆ ಬಿಸಿಸಿಐನ ಕೇಂದ್ರೀಯ ಗುತ್ತಿಗೆ ಆಟಗಾರರ ಪಟ್ಟಿಯಲ್ಲಿರಲಿಲ್ಲ. ಆದರೆ ಈಗ ಟೆಸ್ಟ್ ಕ್ರಿಕೆಟ್ ನಲ್ಲಿ ಅವರು ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದು ಗುತ್ತಿಗೆ ಪಟ್ಟಿಗೆ ಸೇರ್ಪಡೆಗೊಳ್ಳಲಿದ್ದಾರೆ.

ರಿಷಬ್ ರನ್ನು ಟೆಸ್ಟ್ ಕ್ರಿಕೆಟಿಗರಿಗೆ ನೀಡಲಾಗುವ ಗುತ್ತಿಗೆ ಪಟ್ಟಿಗೆ ಸೇರ್ಪಡೆಗೊಳಿಸಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ. ಇನ್ನು, ಈ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನವಿತ್ತ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರೂ ಟಾಪ್ ಎ ವಿಭಾಗದ ಗುತ್ತಿಗೆಗೆ ಬಡ್ತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆ. ಅಂತೂ ಆಸೀಸ್ ಸರಣಿ ಈ ಇಬ್ಬರೂ ಕ್ರಿಕೆಟಿಗರಿಗೆ ಭಾಗ್ಯದ ಬಾಗಿಲು ತೆರೆದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಕ್ರೀಡಾ ಸ್ಪೂರ್ತಿ ಮೆರೆದು ಅಂಪಾಯರ್ ನಿಂದ ಶಹಬ್ಬಾಶ್ ಪಡೆದ ಕೆಎಲ್ ರಾಹುಲ್