Webdunia - Bharat's app for daily news and videos

Install App

Rishabh Pant: ಅದೊಂದು ಕಾರಣಕ್ಕೆ ಹೀರೋ ಆದ ರಿಷಭ್ ಪಂತ್

Sampriya
ಬುಧವಾರ, 28 ಮೇ 2025 (16:59 IST)
Photo Credit X
ಮಂಗಳೂರು: ಜಿತೇಶ್ ಶರ್ಮಾ ಇದ್ದರೆ ತನ್ನ ತಂಡ ಸೋಲುತ್ತೆ ಅಂತ ಗೊತ್ತಿದ್ದರೂ, ಮೋಸದ ಆಟ ಬೇಡ ಎಂದು ಅಂಪೈರ್‌ ಡಿಸಿಷನ್ ನೀಡುವ ಮೊದಲೇ ಕ್ರೀಡಾಸ್ಪೂರ್ತಿ ತೋರಿದ ರಿಷಭ್ ಪಂತ್‌ ನಡವಳಿಕೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮಂಗಳವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವಿರುದ್ಧ ಆರ್‌ಸಿಬಿ ಗೆದ್ದು ಬೀಗಿತು.

ಆದರೆ ಪಂದ್ಯ ಸೋತರು ಎಲ್‌ಎಸ್‌ಜಿ ನಾಯಕ ರಿಷಭ್ ಪಂತ್ ಕ್ರೀಡಾ ಸ್ಫೂರ್ತಿ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.  ಎಲ್‌ಎಸ್‌ಜಿಯ ಬೌಲರ್‌ ದಿಗ್ವೇಶ್ ರಾಠಿ ನಾನ್‌ಸ್ಟ್ರೈಕರ್‌ನ ಕೊನೆಯಲ್ಲಿ ಆರ್‌ಸಿಬಿ ಜಿತೇಶ್ ಶರ್ಮಾ ಅವರನ್ನು ರನೌಟ್ ಮಾಡಲು ಪ್ರಯತ್ನಿಸಿದರು. ಆದಾಗ್ಯೂ, ಮೂರನೇ ಅಂಪೈರ್ ದೊಡ್ಡ ಪರದೆಯಲ್ಲಿ ಡಿಸಿಷನ್ ನೀಡುವ ಮೊದಲೇ ಲಕ್ನೋ ನಾಯಕ ರಿಷಬ್ ಪಂತ್ ಮನವಿಯನ್ನು ಹಿಂಪಡೆಯಲು ನಿರ್ಧರಿಸಿದರು.

ಪಂತ್ ಅವರ ನಿರ್ಧಾರವನ್ನು ಹೇಳಿದಾಗ ಜಿತೇಶ್ ಅವರನ್ನು ಅಪ್ಪಿಕೊಂಡರು. ಈ ಮೂಲಕ RCB ಸ್ಟಾರ್ ಕ್ರೀಸ್‌ನಲ್ಲಿ ಉಳಿಯಲು ಸಹಾಯ ಮಾಡಿದರು. ರಿಷಬ್ ಪಂತ್ ಅವರ ಕ್ರೀಡಾಸ್ಫೂರ್ತಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪಂದ್ಯ ಸೋತಿರಬಹುದು, ಆದರೆ ನಿಮ್ಮ ಕ್ರೀಡಾಸ್ಫೂರ್ತಿ ಎಲ್ಲರ ಮನಸ್ಸನ್ನು ಗೆಲ್ಲಿಸಿದೆ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

IND vs ENG: ಹಾರ್ಟ್ ಬ್ರೇಕ್ ನಂತರ ಟೀಂ ಇಂಡಿಯಾ ಮುಂದಿನ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ

ಮುಂದಿನ ಸುದ್ದಿ
Show comments