ಲಕ್ನೋ ಸೂಪರ್ ಜೈಂಟ್ಸ್ ಗೆ ರಿಷಭ್ ಪಂತ್ ಕ್ಯಾಪ್ಟನ್: ದೇವ್ರೇ ಕಾಪಾಡ್ಬೇಕು ನಿನ್ನ ಅಂದ ಫ್ಯಾನ್ಸ್

Krishnaveni K
ಮಂಗಳವಾರ, 21 ಜನವರಿ 2025 (10:13 IST)
ಲಕ್ನೋ: ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಗೆ ಈ ಸೀಸನ್ ನ ದುಬಾರಿ ಆಟಗಾರ ರಿಷಭ್ ಪಂತ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಅದರ ಬೆನ್ನಲ್ಲೇ ಕೆಎಲ್ ರಾಹುಲ್ ಫ್ಯಾನ್ಸ್ ನಿಮ್ಮನ್ನು ದೇವ್ರೇ ಕಾಪಾಡಬೇಕು ಎಂದು ಟ್ರೋಲ್ ಮಾಡಿದ್ದಾರೆ.

ಇದುವರೆಗೆ ಲಕ್ನೋ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಿದ್ದರು. ಆದರೆ ಕಳೆದ ಸೀಸನ್ ನಲ್ಲಿ ತಂಡದ ಪ್ರದರ್ಶನದಿಂದ ಅಸಮಾಧಾನಗೊಂಡಿದ್ದ ಮಾಲಿಕ ಸಂಜಯ್ ಗೊಯೆಂಕಾ ಮೈದಾನದಲ್ಲೇ ಕೆಎಲ್ ರಾಹುಲ್ ರನ್ನು ತರಾಟೆಗೆ ತೆಗೆದುಕೊಂಡಿದ್ದು ಭಾರೀ ಸುದ್ದಿಯಾಗಿತ್ತು.

ನಿರೀಕ್ಷೆಯಂತೇ ಈ ಐಪಿಎಲ್ ನಲ್ಲಿ ರಾಹುಲ್ ರನ್ನು ಲಕ್ನೋ ಕೈ ಬಿಟ್ಟಿತ್ತು. ಅವರೀಗ ಮೆಗಾ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದ್ದಾರೆ. ರಾಹುಲ್ ಗೆ ಅಂದು ಮೈದಾನದಲ್ಲಿ ಮಾಡಿದ ಅವಮಾನವನ್ನು ಸ್ಮರಿಸಿರುವ ಫ್ಯಾನ್ಸ್ ಈಗ ರಿಷಭ್ ರನ್ನು ಟ್ರೋಲ್ ಮಾಡುತ್ತಿದ್ದಾರೆ.

ನಾಯಕರಾಗಿ ಯಶಸ್ಸು ಗಳಿಸಿದಿರೋ ಬಚಾವ್, ಇಲ್ಲದೇ ಹೋದರೆ ದೇವರೇ ನಿಮ್ಮನ್ನು ಕಾಪಾಡಬೇಕು ಎಂದು ಟ್ರೋಲ್ ಮಾಡುತ್ತಿದ್ದಾರೆ. ಇನ್ನು ನಿನ್ನೆ ವಿಶೇಷ ಕಾರ್ಯಕ್ರಮದ ಮೂಲಕ ರಿಷಭ್ ಪಂತ್ ರನ್ನು ಕ್ಯಾಪ್ಟನ್ ಎಂದು ಸಂಜೀವ್ ಗೊಯೆಂಕಾ ಘೋಷಣೆ ಮಾಡಿದ್ದರು. ಆ ಬಳಿಕ ಮಾತನಾಡಿದ್ದ ಅವರು ಐಪಿಎಲ್ ನಲ್ಲಿ ಯಶಸ್ವೀ ನಾಯಕ ಎಂದರೆ ಎಲ್ಲರೂ ರೋಹಿತ್, ಧೋನಿ ಹೆಸರು ಹೇಳುತ್ತಾರೆ. ನನಗೆ ವಿಶ್ವಾಸವಿದೆ, ಮುಂದಿನ ದಿನಗಳಲ್ಲಿ ಆ ಲಿಸ್ಟ್ ನಲ್ಲಿ ರಿಷಭ್ ಹೆಸರೂ ಇರಲಿದೆ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮುಂದಿನ ಸುದ್ದಿ
Show comments