ರೋಹಿತ್ ರನ್ನು ಮುಂಬೈ ನಾಯಕತ್ವದಿಂದ ಕಿತ್ತುಹಾಕಿದ್ದನ್ನು ಸಮರ್ಥಿಸಿದ ಕೋಚ್ ಗೆ ರಿತಿಕಾ ಟಾಂಗ್

Krishnaveni K
ಮಂಗಳವಾರ, 6 ಫೆಬ್ರವರಿ 2024 (14:51 IST)
ಮುಂಬೈ: ರೋಹಿತ್ ಶರ್ಮಾರನ್ನು ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ಕಿತ್ತು ಹಾಕಿದ್ದನ್ನು ಸಮರ್ಥಿಸಿದ ಕೋಚ್ ಮಾರ್ಕ್ ಬೌಚರ್ ಗೆ ರೋಹಿತ್ ಪತ್ನಿ ರಿತಿಕಾ ಸಜ್ ದೇ ಟಾಂಗ್ ಕೊಟ್ಟಿದ್ದಾರೆ.

ಪಾಡ್ ಕಾಸ್ಟ್ ನಲ್ಲಿ ಮುಂಬೈ ಮುಖ್ಯ ಕೋಚ್ ಮಾರ್ಕ್ ಬೌಚರ್ ರೋಹಿತ್ ರನ್ನು ನಾಯಕತ್ವದಿಂದ ಕಿತ್ತು ಹಾರ್ದಿಕ್ ಪಾಂಡ್ಯಗೆ ಪಟ್ಟ ಕಟ್ಟಿದ್ದರ ಅಸಲಿ ಕಾರಣವೇನೆಂದು ಬಹಿರಂಗಪಡಿಸಿದ್ದರು. ಭಾರತದಲ್ಲಿ ಬಹಳಷ್ಟು ಮಂದಿಗೆ ಇದು ಅರ್ಥವಾಗಲ್ಲ. ಯಾಕೆಂದರೆ ಅವರು ತುಂಬಾ ಭಾವನಾತ್ಮಕವಾಗಿರುತ್ತಾರೆ. ಈ ಭಾವನೆಗಳನ್ನು ದೂರವಿಡಿ. ಈ ನಿರ್ಧಾರದ ಹಿಂದೆ ಕೇವಲ ಕ್ರಿಕೆಟಿಂಗ್  ಕಾರಣವಿತ್ತೇ ಹೊರತು ಬೇರೇನೂ ಇಲ್ಲ ಎಂದಿದ್ದರು.

ರಿತಿಕಾ ಕಾಮೆಂಟ್
ಮಾರ್ಕ್ ಬೌಚರ್ ರ ಈ ಸಂದರ್ಶನಕ್ಕೆ ರೋಹಿತ್ ಪತ್ನಿ ರಿತಿಕಾ ಇನ್ ಸ್ಟಾಗ್ರಾಂನಲ್ಲಿ ಕಾಮೆಂಟ್ ಮಾಡಿದ್ದು, ‘ಇದರಲ್ಲಿ ಹಲವು ತಪ್ಪುಗಳಿವೆ’ ಎಂದು ಕಾಮೆಂಟ್ ಮಾಡಿದ್ದಾರೆ. ರಿತಿಕಾರ ಈ ಕಾಮೆಂಟ್ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರೋಹಿತ್ ರನ್ನು ನಾಯಕತ್ವದಿಂದ ಕಿತ್ತು ಹಾಕಿದಾಗಲೂ ರಿತಿಕಾ ಸೋಷಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದರು.

ಮುಂಬೈ ಇಂಡಿಯನ್ಸ್ ತಂಡವನ್ನು ಅತೀ ಹೆಚ್ಚು ಬಾರಿ ಚಾಂಪಿಯನ್ಸ್ ಪಟ್ಟಕ್ಕೇರಿಸಿದ ರೋಹಿತ್ ರನ್ನು ಇದ್ದಕ್ಕಿದ್ದಂತೆ ನಾಯಕತ್ವದಿಂದ ಕಿತ್ತು ಹಾಕಿ ಅವಮಾನ ಮಾಡಲಾಗಿದೆ ಎಂದು ಅಭಿಮಾನಿಗಳು ಫ್ರಾಂಚೈಸಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಅನೇಕರು ಇನ್ನು ಮುಂದೆ ಮುಂಬೈ ಬೆಂಬಲಿಸುವುದಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ಕೇವಲ ರಿತಿಕಾ ಮಾತ್ರವಲ್ಲ, ತಂಡದ ಸಹ ಆಟಗಾರರಾದ ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ಸೇರಿದಂತೆ ಹಲವರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಅಷ್ಟು ದಿನ ತಂಡದ ನಾಯಕರಾಗಿದ್ದ ರೋಹಿತ್ ಗೆ ಈ ರೀತಿ ಮಾಡಿದ್ದು ಹೃದಯ ಚೂರು ಮಾಡಿದೆ ಎಂದು ಪರೋಕ್ಷವಾಗಿ ಹೇಳಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments