ಯುವರಾಜ್ ಸಿಂಗ್ ವೃತ್ತಿ ಜೀವನವನ್ನೇ ಫಿನಿಶ್ ಮಾಡಿದ್ದ ವಿರಾಟ್ ಕೊಹ್ಲಿ: ಶಾಕಿಂಗ್ ಸತ್ಯ ಹೇಳಿದ ರಾಬಿನ್ ಉತ್ತಪ್ಪ

Krishnaveni K
ಶುಕ್ರವಾರ, 10 ಜನವರಿ 2025 (12:57 IST)
Photo Credit: X
ಮುಂಬೈ: ಟೀಂ ಇಂಡಿಯಾ 2011 ರಲ್ಲಿ ಏಕದಿನ ವಿಶ್ವಕಪ್ ಗೆಲ್ಲಲು ಕಾರಣರಾಗಿದ್ದ ಯುವರಾಜ್ ಸಿಂಗ್ ವೃತ್ತಿ ಜೀವನವನ್ನು ಫಿನಿಶ್ ಮಾಡಿದ್ದು ವಿರಾಟ್ ಕೊಹ್ಲಿ ಎಂಬ ಶಾಕಿಂಗ್ ಸತ್ಯವನ್ನು ರಾಬಿನ್ ಉತ್ತಪ್ಪ ರಿವೀಲ್ ಮಾಡಿದ್ದಾರೆ.

ಸಂದರ್ಶನವೊಂದರಲ್ಲಿ ರಾಬಿನ್ ಉತ್ತಪ್ಪ ಈ ವಿಚಾರ ಹೇಳಿದ್ದಾರೆ. 2011 ರ ಏಕದಿನ ವಿಶ್ವಕಪ್ ವೇಳೆಯೇ ಯುವರಾಜ್ ಸಿಂಗ್ ತೀರಾ ಕೆಮ್ಮುತ್ತಿದ್ದರು. ಅದಾದ ಬಳಿಕ ಅವರಿಗೆ ಕ್ಯಾನ್ಸರ್ ಇರುವುದು ಖಚಿತವಾಯಿತು. ಹೀಗಾಗಿ ಅವರು ಅಮೆರಿಕಾದಲ್ಲಿ ಟ್ರೀಟ್ ಮೆಂಟ್ ಗೆ ತೆರಳಿದ್ದರು.

ಯುವಿ ಕ್ಯಾನ್ಸರ್ ಗೆದ್ದು ಭಾರತಕ್ಕೆ ಮರಳಿದ ಮೇಲೆ ಕೆಲವು ದಿನ ಕ್ರಿಕೆಟ್ ನಿಂದ ದೂರವಿದ್ದರು. ಅದಾದ ಬಳಿಕ ಅವರು ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದರು. ಆದರೆ ಕೆಲವೇ ಪಂದ್ಯಗಳಲ್ಲಿ ಮಾತ್ರ ಆಡಿದ್ದರು.

ಕ್ಯಾನ್ಸರ್ ಗೆದ್ದರೂ ಯುವಿಗೆ ಮೊದಲಿನ ದೈಹಿಕ ಕ್ಷಮತೆಯಿರಲಿಲ್ಲ. ಹೀಗಾಗಿ ಆಗ ಜಾರಿಯಲ್ಲಿದ್ದ ಎಲ್ಲಾ ಕಠಿಣ ಫಿಟ್ನೆಸ್ ಟೆಸ್ಟ್ ಗಳನ್ನು ಮಾಡಲು ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ತಮಗೆ ಸ್ವಲ್ಪ ವಿನಾಯ್ತಿ ಕೊಡುವಂತೆ ಟೀಂ ಮ್ಯಾನೇಜ್ ಮೆಂಟ್ ಗೆ ಮನವಿ ಮಾಡಿದ್ದರು.

ಆಗ ವಿರಾಟ್ ಕೊಹ್ಲಿ ತಂಡದ ನಾಯಕರಾಗಿದ್ದರು. ಆದರೆ ಕೊಹ್ಲಿ ಯುವಿ ಮನವಿಯನ್ನು ಒಪ್ಪಿಕೊಳ್ಳಲಿಲ್ಲ. ಹೀಗಾಗಿ ಯುವಿ ಅನಿವಾರ್ಯವಾಗಿ ವೃತ್ತಿ ಜೀವನ ಕೊನೆಗೊಳಿಸಬೇಕಾಯಿತು ಎಂದು ರಾಬಿನ್ ಉತ್ತಪ್ಪ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments