Webdunia - Bharat's app for daily news and videos

Install App

ಆರ್ ಸಿಬಿಯಲ್ಲಿ ಇಲ್ಲಿನವರಿಗೆ ಅವಕಾಶವೇ ಕೊಡಲ್ಲ ಎಂದ ರಾಬಿನ್ ಉತ್ತಪ್ಪ

Webdunia
ಬುಧವಾರ, 27 ಡಿಸೆಂಬರ್ 2023 (12:59 IST)
Photo Courtesy: Twitter
ಬೆಂಗಳೂರು: ಚಿನ್ನಸ್ವಾಮಿ ಮೈದಾನದಲ್ಲಿ ಕೆಸಿಸಿ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕ ಮೂಲದ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅಭಿಮಾನಿಗಳೊಂದಿಗೆ ಮಾತನಾಡಿದ ವಿಡಿಯೋವೊಂದು ಈಗ ಸಖತ್ ವೈರಲ್ ಆಗಿದೆ.

ಕೆಸಿಸಿ ಟೂರ್ನಿ ನೋಡಲು ಬಂದಿದ್ದ ಅಭಿಮಾನಿಗಳು ಬೌಂಡರಿ ಗೆರೆ ಬಳಿ ಫೀಲ್ಡಿಂಗ್ ಮಾಡುತ್ತಿದ್ದ ರಾಬಿನ್ ಉತ್ತಪ್ಪರನ್ನು ಮಾತನಾಡಿಸಿದರು. ‘ಉತ್ತಪ್ಪ ಆರ್ ಸಿಬಿಗೆ ಬಾ’ ಎಂದು ಅಭಿಮಾನಿಗಳು ಕರೆದಿದ್ದಾರೆ.

ಅದನ್ನು ಕೇಳಿಸಿಕೊಂಡು ಗ್ಯಾಲರಿ ಬಳಿ ಬಂದ ರಾಬಿನ್ ಉತ್ತಪ್ಪ ನಗುತ್ತಲೇ  ಆರ್ ಸಿಬಿಯಲ್ಲಿ ಇಲ್ಲಿನವರನ್ನು ಸೇರಿಸಿಕೊಳ್ಳಲ್ಲ ಎಂದು ಉತ್ತರಿಸಿದ್ದಾರೆ. ಅವರ ಪ್ರತಿಕ್ರಿಯೆ ಈಗ ವೈರಲ್ ಆಗಿದೆ.

ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕನ್ನಡಿಗರು ಇರುವುದೇ ಅಪರೂಪ. ಕನ್ನಡಿಗರನ್ನು ಕಡೆಗಣಿಸಲಾಗುತ್ತದೆ ಎಂಬ ಆರೋಪವೂ ಇದೆ. ಇದೀಗ ಉತ್ತಪ್ಪ ನಗುತ್ತಲೇ ಈ ರೀತಿ ಹೇಳಿದರೂ ಇದೇ ವಾಸ್ತವ ಎಂದು ಒಪ್ಪಿಕೊಳ್ಳಲೇಬೇಕು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments