Webdunia - Bharat's app for daily news and videos

Install App

ಸೋತಾಗ ಸುದ್ದಿಗೋಷ್ಠಿಗೆ ಕೋಚ್ ದ್ರಾವಿಡ್ ಕಳುಹಿಸುವ ರೋಹಿತ್ ಶರ್ಮಾ!

Krishnaveni K
ಸೋಮವಾರ, 29 ಜನವರಿ 2024 (10:09 IST)
ಹೈದರಾಬಾದ್: ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಸೋತ ಬಳಿಕ ಫ್ಯಾನ್ಸ್ ಆಕ್ರೋಶ ರೋಹಿತ್ ಶರ್ಮಾ ಮೇಲೆ ತಿರುಗಿದೆ.

ಗೆಲ್ಲಬೇಕಿದ್ದ ಪಂದ್ಯವನ್ನು ಸೋತಿದ್ದಕ್ಕೆ ಫ್ಯಾನ್ಸ್ ಸಿಕ್ಕಾಪಟ್ಟೆ ಸಿಟ್ಟಾಗಿದ್ದಾರೆ. ಜೊತೆಗೆ ಸೋತ ಬಳಿಕ ಪತ್ರಿಕಾಗೋಷ್ಠಿಗೆ ರೋಹಿತ್ ಶರ್ಮಾ ಗೈರಾಗುವ ಚಾಳಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳು ಟೀಕಿಸಿದ್ದಾರೆ.

ಹೆಚ್ಚಿನ ಸಂದರ್ಭದಲ್ಲಿ ತಂಡ ಸೋತಾಗ ರೋಹಿತ್ ಶರ್ಮಾ ಪತ್ರಿಕಾಗೋಷ್ಠಿಗೆ ಬರಲ್ಲ. ಬದಲಾಗಿ ಕೋಚ್ ರಾಹುಲ್ ದ್ರಾವಿಡ್ ಬರುತ್ತಾರೆ. ಇದು ಕಾಕತಾಳೀಯವೋ ಫ್ಯಾನ್ಸ್ ಆರೋಪವೇ ನಿಜವೋ ಗೊತ್ತಿಲ್ಲ. ಆದರೆ ಪ್ರತೀ ಬಾರಿಯೂ ಹೀಗೆ ಆಗುತ್ತಿರುವುದಂತೂ ನಿಜ. ನಿನ್ನೆಯ ಪಂದ್ಯದ ಬಳಿಕವೂ ದ್ರಾವಿಡ್ ಸುದ್ದಿಗೋಷ್ಠಿಗೆ ಬಂದಿದ್ದರು.

ಪ್ರತೀ ಬಾರಿ ಸರಣಿ ಆರಂಭಕ್ಕೆ ಮುನ್ನ ರೋಹಿತ್ ಸುದ್ದಿಗೋಷ್ಠಿಗೆ ಬರುತ್ತಾರೆ. ಕೆಲವೊಂದು ಪಂದ್ಯ ಗೆದ್ದಾಗಲು ಬಂದಿದ್ದು ಇದೆ. ಆದರೆ ಸೋತಾಗ ಮಾಧ್ಯಮಗಳ ಮುಂದೆ ಬಂದಿದ್ದು ಕಡಿಮೆ. ಹೀಗಾಗಿ ಅಭಿಮಾನಿಗಳು ಈ ಚಾಳಿಯನ್ನು ಟೀಕಿಸಿದ್ದಾರೆ. ಸೋತಾಗಲೂ ಮಾಧ್ಯಮ, ಫ್ಯಾನ್ಸ್ ಎದುರಿಸುವ ತಾಕತ್ತು ಕ್ಯಾಪ್ಟನ್ ಗಿರಬೇಕು ಎಂದಿದ್ದಾರೆ.

ಈ ಮೊದಲು ಕೊಹ್ಲಿ ನಾಯಕರಾಗಿದ್ದಾಗ ಹೀಗೆ ಮಾಡುತ್ತಿರಲಿಲ್ಲ. ಸೋತಾಗಲೂ ತಾವೇ ಎಷ್ಟೋ ಬಾರಿ ಪತ್ರಿಕಾಗೋಷ್ಠಿಗೆ ಬಂದು ಮಾತನಾಡಿದ್ದು ಇದೆ. ಇದು ನಾಯಕನ ಗುಣ. ಬದಲಾಗಿ ಸೋತಾಗ ಬೇರೆಯವರನ್ನು ಮುಂದೆ ಬಿಟ್ಟು ತಾವು ಹಿಂದೆ ಕೂರಬಾರದು ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments