ಟಿ20 ವಿಶ್ವಕಪ್ ಗೆ ಮುನ್ನ ರೋಹಿತ್ ಶರ್ಮಾರಿಂದ ಆತಂಕ

Krishnaveni K
ಶನಿವಾರ, 4 ಮೇ 2024 (12:17 IST)
Photo Courtesy: Twitter
ಮುಂಬೈ: ಟಿ20 ವಿಶ್ವಕಪ್ ಗೆ ಮುನ್ನ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾರಿಂದ ಆತಂಕಕಾರೀ ವಿಚಾರವೊಂದು ಹೊರಬಿದ್ದಿದೆ. ಇದೀಗ ರೋಹಿತ್ ಶರ್ಮಾ ಬೆನ್ನು ನೋವಿನ ಸಮಸ್ಯೆಗೊಳಗಾಗಿದ್ದಾರೆ.

ಕೆಕೆಆರ್ ವಿರುದ್ಧ ನಿನ್ನೆ ನಡೆದಿದ್ದ ಮುಂಬೈ ಇಂಡಿಯನ್ಸ್ ಪಂದ್ಯದಲ್ಲಿ ರೋಹಿತ್ ಶರ್ಮಾ ಫೀಲ್ಡಿಂಗ್ ಮಾಡಿರಲಿಲ್ಲ. ಇದಕ್ಕೆ ಕಾರಣ ಅವರಿಗೆ ಬೆನ್ನು ನೋವು ಕಾಡುತ್ತಿರುವುದು ಎಂದು ತಿಳಿದುಬಂದಿದೆ. ನಿನ್ನೆಯ ಪಂದ್ಯದಲ್ಲಿ ಅವರಿಗೆ ಕೇವಲ ಬ್ಯಾಟಿಂಗ್ ಮಾತ್ರ ಮಾಡಿದ್ದರು.

ಪದೇ ಪದೇ ಬೆನ್ನು ನೋವು ಕಾಡುತ್ತಿರುವುದು ಆತಂಕಾರೀ ವಿಚಾರವಾಗಿದೆ. ಪಂದ್ಯದ ಬಳಿಕ ರೋಹಿತ್ ಆರೋಗ್ಯ ಸ್ಥಿತಿ ಬಗ್ಗೆ ಬೌಲರ್ ಪಿಯೂಷ್ ಚಾವ್ಲಾ ಮಾಹಿತಿ ನೀಡಿದ್ದರು. ಬೆನ್ನಿನಲ್ಲಿ ಕೊಂಚ ನೋವು ಕಂಡುಬರುತ್ತಿದೆ ಎಂದು ರೋಹಿತ್ ಹೇಳಿದ್ದರಿಂದ ಅವರು ಫೀಲ್ಡಿಂಗ್ ಮಾಡದೇ ಇರಲು ತೀರ್ಮಾನಿಸಿದರು. ಮುನ್ನೆಚ್ಚರಿಕೆಯ ಕ್ರಮವಾಗಿ ಫೀಲ್ಡಿಂಗ್ ಮಾಡಲಿಲ್ಲ ಎಂದಿದ್ದಾರೆ.

ಕಳೆದ ಬಾರಿ ಇಂಗ್ಲೆಂಡ್ ಟೆಸ್ಟ್ ಸರಣಿ ವೇಳೆಯೂ ರೋಹಿತ್ ಗೆ ಬೆನ್ನು ನೋವಿನ ಸಮಸ್ಯೆ ಕಂಡುಬಂದಿತ್ತು. ಬಳಿಕ ಅವರು ವಿಶ್ರಾಂತಿ ಪಡೆಯಬೇಕಾಗಿ ಬಂದಿತ್ತು. ವಿಶ್ವಕಪ್ ಟೂರ್ನಿಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು ರೋಹಿತ್ ಗೆ ಬೆನ್ನು ನೋವು ಟೀಂ ಇಂಡಿಯಾ ಪಾಳಯದಲ್ಲಿ ಆತಂಕ ಮೂಡಿಸಿದೆ.

ಜೂನ್ 2 ರಿಂದ ಟಿ20 ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಟೂರ್ನಿ ನಡೆಯಲಿದೆ. ರೋಹಿತ್ ಶರ್ಮಾಗೆ ಉಪನಾಯಕರಾಗಿ ಹಾರ್ದಿಕ್ ಪಾಂಡ್ಯರನ್ನು ನೇಮಿಸಲಾಗಿದೆ. ಟಿ20  ವಿಶ್ವಕಪ್ ಟೂರ್ನಿ ಗೆಲ್ಲಬೇಕಾದರೆ ರೋಹಿತ್ ಶರ್ಮಾ ಫಿಟ್ ಆಗಿರಲೇಬೇಕು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ರೋಹಿತ್, ಕೊಹ್ಲಿಗೆ ದೇಶೀಯ ಟೂರ್ನಿ ಮಾಡಲು ಒತ್ತಡ ಹೇರಲಾಗಿದೆಯೇ

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಮುಂದಿನ ಸುದ್ದಿ
Show comments