ಕ್ಯಾಚ್ ಬಿಟ್ಟಿದ್ದಕ್ಕೆ ಪಶ್ಚಾತ್ತಾಪ: ಅಕ್ಸರ್ ಪಟೇಲ್ ಗಾಗಿ ದೊಡ್ಡ ನಿರ್ಧಾರ ಮಾಡಿದ ರೋಹಿತ್ ಶರ್ಮಾ

Krishnaveni K
ಶುಕ್ರವಾರ, 21 ಫೆಬ್ರವರಿ 2025 (13:09 IST)
ದುಬೈ: ಬಾಂಗ್ಲಾದೇಶ ವಿರುದ್ಧ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಅಕ್ಸರ್ ಪಟೇಲ್ ಗೆ ತನ್ನಿಂದಾಗಿ ಹ್ಯಾಟ್ರಿಕ್ ಚಾನ್ಸ್ ಮಿಸ್ ಆಯ್ತು ಎಂಬ ಕಾರಣಕ್ಕೆ ನಾಯಕ ರೋಹಿತ್ ಶರ್ಮಾ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ತಾವೆಸೆದ ಮೊದಲ ಓವರ್ ನಲ್ಲೇ ಅಕ್ಸರ್ ಸತತ ಎರಡು ವಿಕೆಟ್ ಪಡೆದು ಹ್ಯಾಟ್ರಿಕ್ ವಿಕೆಟ್ ಪಡೆಯುವ ಅವಕಾಶ ಹೊಂದಿದ್ದರು. ಐಸಿಸಿ ಕೂಟದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಅಪರೂಪದ ದಾಖಲೆ ಅವರು ಮಾಡಲಿದ್ದರು.

ಆದರೆ ಮೂರನೇ ಎಸೆತದಲ್ಲಿ ತಮ್ಮ ಕೈಗೆ ಬಂದ ಕ್ಯಾಚ್ ಕೈ ಚೆಲ್ಲಿ ರೋಹಿತ್ ಆ ಅವಕಾಶವನ್ನು ಹಾಳು ಮಾಡಿದರು. ಇದು ರೋಹಿತ್ ಗೂ ತೀವ್ರ ಬೇಸರ ತಂದಿದೆ. ಮೈದಾನದಲ್ಲೇ ಅಕ್ಸರ್ ಗೆ ಕೈ ಮುಗಿದು ಕ್ಷಮೆ ಕೇಳಿದ್ದರು. ಇದು ಇಷ್ಟಕ್ಕೇ ನಿಂತಿಲ್ಲ.

ಇದೀಗ ತಮ್ಮಿಂದಾಗಿ ಅಕ್ಸರ್ ಗೆ ಬಹುದೊಡ್ಡ ಅವಕಾಶ ಮಿಸ್ ಆಗಿದ್ದಕ್ಕೆ ರೋಹಿತ್ ಒಂದು ನಿರ್ಧಾರಕ್ಕೆ ಬಂದಿದ್ದಾರೆ. ಪಂದ್ಯದ ಬಳಿಕ ಮಾತನಾಡಿದ್ದ ರೋಹಿತ್ ‘ನಾನು ಅಕ್ಸರ್ ರನ್ನು ಡಿನ್ನರ್ ಗೆ ಕರೆದುಕೊಂಡು ಹೋಗುತ್ತೇನೆ. ಅದು ಸುಲಭ ಕ್ಯಾಚ್ ಆಗಿತ್ತು. ಅದನ್ನು ನಾನು ಹಿಡಿಯಬೇಕಾಗಿತ್ತು’ ಎಂದು ರೋಹಿತ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಮುಂದಿನ ಸುದ್ದಿ
Show comments